More

    ಬಸವಣ್ಣರಿಂದ ಪ್ರಜಾಪ್ರಭುತ್ವದ ಪರಿಕಲ್ಪನೆ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಡಿ.ಗಂಗಾಧರ ಅಭಿಮತ

    ಮಂಡ್ಯ: ಸಮಸಮಾಜ ನಿರ್ಮಾಣಕ್ಕಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆ ತಂದ ಬಸವಣ್ಣ ಅವರ ಕೊಡುಗೆ ಅಪಾರ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಡಿ.ಗಂಗಾಧರ ಹೇಳಿದರು.
    ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಬಸವೇಶ್ವರರ ಜಯಂತ್ಯುತ್ಸವದಲ್ಲಿ ಮಾತನಾಡಿದರು. ಕರ್ನಾಟಕದಲ್ಲಿ 800 ವರ್ಷಗಳ ಹಿಂದೆಯೇ ಬಸವಣ್ಣ ಅವರು ಸಮಾನತೆ ಹಾಗೂ ಉತ್ತಮ ಸಮಾಜ ನಿರ್ಮಾಣಕ್ಕೆ ಹೋರಾಟ ಮಾಡಿದ್ದರು. ಅವರ ಶ್ರಮದ ಫಲವಾಗಿ ಇಂದು ನಾವೆಲ್ಲರು ಒಂದೇ ಎಂಬ ಭಾವನೆಯಲ್ಲಿ ಬದುಕುತ್ತಿದ್ದೇವೆ ಎಂದು ತಿಳಿಸಿದರು.
    ವಿವಿಧ ಶರಣರನ್ನು ಸಂಘಟಿಸಿ ಅನುಭವ ಮಂಟಪವನ್ನು ಸ್ಥಾಪಿಸಿ, ವರ್ಣಾಶ್ರಮ, ಜಾತಿ ಪದ್ಧತಿಯ ವಿರುದ್ಧ ಧ್ವನಿಯಾಗಿ ನಿಂತವರು. ಪ್ರಪಂಚದಲ್ಲಿರುವುದು ಹೆಣ್ಣು ಗಂಡು ಎರಡೇ ಜಾತಿಗಳು. ಮಹಿಳೆಯು ಸಹ ಪುರುಷನಷ್ಟೇ ಸರಿ ಸಮಾನಳು ಎಂದು ಜಗತ್ತಿಗೆ ಸಾರುವ ಮೂಲಕ ಸಾಮಾಜಿಕ ಕ್ರಾಂತಿಗೆ ತಮ್ಮನ್ನು ತೊಡಗಿಸಿಕೊಂಡರು ಎಂದು ಸ್ಮರಿಸಿದರು.
    ಬಸವದಳದ ಅಧ್ಯಕ್ಷ ಎಂ.ಗುರುಪ್ರಸಾದ್, ಕಾಂಗ್ರೆಸ್ ಮಹಿಳಾ ಸಮಿತಿ ಅಧ್ಯಕ್ಷೆ ಅಂಜನಾ, ವೀಣಾ, ಜಯಲಕ್ಷ್ಮೀ, ಗೀತಾ, ವಿಜಯಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts