ಲಂಡನ್: ರಾಜ್ಯಾದ್ಯಂತ ಮಾತ್ರವಲ್ಲದೆ ವಿದೇಶದಲ್ಲೂ ಇಂದು ಬಸವ ಜಯಂತಿ ಆಚರಿಸಲ್ಪಟ್ಟಿದೆ. ದೂರದ ಲಂಡನ್ನಲ್ಲೂ ಬಸವಣ್ಣನವರ 890ನೇ ಜನ್ಮದಿನವನ್ನು ಆಚರಣೆ ಮಾಡಲಾಗಿದೆ. ಲಂಡನ್ನ ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ಸರ್ಕಾರಿ ವೈದ್ಯ ಸಾವಿಗೆ ಶರಣು!
ಡಾ.ನೀರಜ್ ಪಾಟೀಲ್ ಅವರ ನೇತೃತ್ವದ ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ಹಮ್ಮಿಕೊಂಡಿದ್ದ ಈ ಬಸವ ಜಯಂತಿ ಆಚರಣೆಯಲ್ಲಿ ಯುಕೆನಲ್ಲಿರುವ ಇಂಡಿಯನ್ ಹೈ ಕಮಿಷನರ್ ವಿಕ್ರಮ್ ದೊರೆಸ್ವಾಮಿ ಲಂಡನ್ನಲ್ಲಿರುವ ಶ್ರೀಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ಚೇರ್ಮನ್ ಡಾ.ನೀರಜ್ ಪಾಟೀಲ್ ಸೇರಿದಂತೆ ಅನೇಕ ಅನಿವಾಸಿ ಭಾರತೀಯರು ಪಾಲ್ಗೊಂಡರು.
ಪ್ರಧಾನಿ ನರೇಂದ್ರ ಮೋದಿಯವರು 2015ರ ನ. 14ರಂದು ಈ ಬಸವೇಶ್ವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು 2018ರ ಅ. 26ರಂದು ಈ ಪ್ರತಿಮೆಗೆ ನಮನ ಸಲ್ಲಿಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ಮಾ. 5ರಂದು ಈ ಬಸವೇಶ್ವರ ಪ್ರತಿಮೆಗೆ ಗೌರವ ಸಲ್ಲಿಸಿದ್ದರು ಎಂಬುದಾಗಿ ಡಾ.ನೀರಜ್ ಪಾಟೀಲ್ ತಿಳಿಸಿದ್ದಾರೆ.
ಬಂಡಾಯ ಶಮನಕ್ಕಾಗಿ ಶಾಸಕರ ಕಾಲು ಹಿಡಿಯಲು ಹೋದ ಜೆಡಿಎಸ್ ಅಭ್ಯರ್ಥಿ!