ಧಾರವಾಡ: ರಾಜ್ಯ ಸರ್ಕಾರವು ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ನೂತನ ಭಾವಚಿತ್ರ ಅಳವಡಿಸಲು ಆದೇಶಿಸಿದೆ. ನಗರದ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಫೆ. ೧೭ರಂದು ನಡೆಯುವ ಕಾರ್ಯಕ್ರಮದಲ್ಲಿ ನೂತನ ಭಾವಚಿತ್ರವನ್ನು ಅನಾವರಣಗೊಳಿಸಲಾಗುವುದು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಬಸವಣ್ಣನವರ ನೂತನ ಭಾವಚಿತ್ರ ಅನಾವರಣ ಕಾರ್ಯಕ್ರಮದ ಪೂರ್ವಭಾವಿಯಲ್ಲಿ ಅವರು ಮಾತನಾಡಿದರು.
ಅಂದು ಬೆಳಗ್ಗೆ ೯ ಗಂಟೆಗೆ ವಿವಿಧ ಕಲಾತಂಡಳೊ0ದಿಗೆ ಶ್ರೀ ಬಸವೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ ಜಿಲ್ಲಾಽಕಾರಿ ಕಚೇರಿಯಿಂದ ಹೊರಡಲಿದೆ. ೧೧ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭಾವಚಿತ್ರ ಅನಾವರಣಗೊಳಿಸುವರು. ಜಿಲ್ಲೆಯ ಎಲ್ಲ ಜನಪ್ರತಿನಿಽಗಳು ಭಾಗಹಿಸಲಿದ್ದಾರೆ ಎಂದರು.
ಡಾ. ವೀರಣ್ಣ ರಾಜೂರ, ಎಂ.ವಿ. ಗೊಂಗಡಶೆಟ್ಟಿ, ಶಂಕರ ಕುಂಬಿ, ಬಸವಂತಪ್ಪ ತೋಟದ, ಶಂಭು ಹೆಗಡಾಳ, ಮುಕ್ತಾ ಸವಡಿ, ಇತರರು ಕಾರ್ಯಕ್ರಮ ಸಂಘಟನೆಯ ಸ್ವರೂಪ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.