ಹುಬ್ಬಳ್ಳಿ: ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಎಲ್ಲ ಮುಖಂಡರೊಂದಿಗೆ ಮಾತುಕತೆ ನಡೆದಿದೆ.
ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು. ಚುನಾವಣೆ ಘೋಷಣೆಯಾದ ಕೂಡಲೇ ಬಿಜೆಪಿಗೆ ಸೇರ್ಪಡೆ ಆಗುವುದು ನಿರ್ಧಾರವಾಗಲಿದೆ ಎಂದೂ ಅವರು ತಿಳಿಸಿದರು.
ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆಸಿರಿ, ಇಲ್ಲದಿದ್ದರೆ..; ಸರ್ಕಾರಕ್ಕೆ ಸವಾಲೆಸೆದ ರಾಜ್ ಠಾಕ್ರೆ