ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಗೆ ಎರಡು ಖಾಸಗಿ ಸಂಸ್ಥೆಗಳಿಗೆ ಅನುಮತಿ ನೀಡುವ ಮೂಲಕ ಗೌಪ್ಯ ಮಾಹಿತಿಗೆ ಕನ್ನ ಹಾಕಲಾಗಿದ್ದು ಈ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕೆಂದು ಕಾಂಗ್ರೆಸ್ ಒತ್ತಾಯ ಮಾಡಿದೆ. ಪ್ರಕರಣದ ತನಿಖೆ ನಡೆಸುವಂತೆ ಬಿಬಿಎಂಪಿ ಅಯುಕ್ತರಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ಬೆಂಗಳೂರು ನಗರದ ಉಸ್ತುವಾರಿ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಎ್ಐಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಬೇಕು. ಜತೆಗೆ, ಈ ಅಕ್ರಮಕ್ಕೆ ಕಾರಣವಾದವರನ್ನು ಸಹ ಬಂಧಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಪಿಸಿಸಿ ಅಧ್ಯ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪದ ನಾಯಕ ಸಿದ್ದರಾಮಯ್ಯ ಹಾಗೂ ಇತರರು, ಮತದಾರರ ಮಾಹಿತಿ ಕಳವಿನ ಆರೋಪ ಮಾಡಿದರು. ಚಿಲುಮೆ ಎಜುಕೇಶನ್ ಇನ್ಸ್ಟಿಟ್ಯೂಟ್ ಎಂಬ ಖಾಸಗಿ ಸಂಸ್ಥೆ ಮತದಾರರ ಜಾಗೃತಿ ಹಾಗೂ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದು 2022ರ ಆ.19ಕ್ಕೆ ಸರ್ಕಾರಕ್ಕೆ ಅರ್ಜಿ ಹಾಕಿತ್ತು.
ಕಾಂಗ್ರೆಸ್ನವರು ತಮ್ಮವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ. ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮ ಕೈಗೊಳ್ಳಲು ಬಿಬಿಎಂಪಿ ಹಾಗೂ ಸ್ಥಳಿಯ ಸಂಸ್ಥೆಗಳಿಗೆ ವಹಿಸಿರುತ್ತಾರೆ. ಅವರು ಸಮೀಾ ಕೆಲಸವನ್ನು ಎನ್ಜಿಓಗಳಿಗೆ ನೀಡಿರುತ್ತಾರೆ. ಇದೇನು ಮೊದಲ ಬಾರಿ ನೀಡಿರುವುದಲ್ಲ. 2018ರಲ್ಲಿ ಇದ್ದ ಸರ್ಕಾರದ ಕಾಲದಲ್ಲಿಯೂ ನೀಡಿದ್ದಾರೆ. ಕಾಂಗ್ರೆಸ್ನವರು ನನ್ನ ರಾಜೀನಾಮೆಗೆ ಒತ್ತಾಯಿಸುವುದು ಹಾಸ್ಯಾಸ್ಪದ. ಸಿದ್ದರಾಮಯ್ಯ ಸರ್ಕಾರ 200 ಕೋಟಿ ರೂ. ಖರ್ಚು ಮಾಡಿ ಜಾತಿ ಸಮೀೆ ಮಾಡಿ ಗೌಪ್ಯವಾಗಿಟ್ಟಿದ್ದು ಏಕೆ?
| ಬಸವರಾಜ ಬೊಮ್ಮಾಯಿ ಸಿಎಂ
ಆಪರೇಷನ್ ಕಮಲದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿಯೇ ತನಿಖೆ ಮಾಡಬೇಕು. ಏಕೆಂದರೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ.
| ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕ
https://www.vijayavani.net/mandya-annayya-life-is-tragic-end-in-banglore/