More

    ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಎತ್ತಂಗಡಿ, ಮಂಜುನಾಥ್ ಪ್ರಸಾದ್ ನೇಮಕ

    ಬೆಂಗಳೂರು: ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಆಯುಕ್ತರಾಗಿ ಎನ್. ಮಂಜುನಾಥ್ ಪ್ರಸಾದ್ ನೇಮಕಗೊಂಡಿದ್ದಾರೆ. ತತ್‌ಕ್ಷಣವೇ ಜಾರಿ ಬರುವಂತೆ ಸರ್ಕಾರ ಈ ಆದೇಶ ಹೊರಡಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

    ನಿನ್ನೆಯಷ್ಟೇ(ಶುಕ್ರವಾರ) ಬೆಂಗಳೂರು ಲಾಕ್‍ಡೌನ್ ಕುರಿತು ಮಾತನಾಡಿದ್ದ ಅನಿಲ್ ಕುಮಾರ್, ನಗರದಲ್ಲಿ ಕೋವಿಡ್ ಸೋಂಕಿನ ಚೈನ್​ ಲಿಂಕ್ ಕತ್ತರಿಸಲು ಲಾಕ್‍ಡೌನ್ ಅವಧಿಯ ವಿಸ್ತರಣೆ ಅಗತ್ಯವಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಂದೆಯೂ ಪ್ರಸ್ತಾವನೆ ಇಟ್ಟಿದ್ದು, ಸಿಎಂ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದರು. ಆದರೆ, ಕರೊನಾ ನಿರ್ವಹಣೆ ಕುರಿತು ಸಿಎಂ ಯಡಿಯೂರಪ್ಪ ನಿನ್ನೆ ನಡೆಸಿದ ಬೆಂಗಳೂರಿನ 8 ವಲಯಗಳ ಉಸ್ತುವಾರಿಗಳ ಸಭೆಯಲ್ಲಿ ಅನಿಲ್​ಕುಮಾರ್​ ಪಾಲ್ಗೊಂಡಿರಲಿಲ್ಲ. ಸಿಎಂ ಅವರೇ ಅನಿಲ್ ಕುಮಾರ್​ರನ್ನು ಸಭೆಯಿಂದ ಹೊರಗಿಟ್ಟಿದ್ದರು ಎನ್ನಲಾಗಿತ್ತು. ಇದೀಗ ಅನಿಲ್​ಕುಮಾರ್​ರನ್ನು ಎತ್ತಂಗಡಿ ಮಾಡಲಾಗಿದೆ.

    ಇದನ್ನೂ ಓದಿರಿ ಸಿಎಂ ಯಡಿಯೂರಪ್ಪಗೆ ಕರೊನಾ ನೆಗೆಟಿವ್​

    ಬೆಂಗಳೂರಿನಲ್ಲಿ ಕರೊನಾ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ಅನಿಲ್ ಕುಮಾರ್​ರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ. ನೂತನ ಕಮಿಷನರ್​ ಮಂಜುನಾಥ್ ಪ್ರಸಾದ್ ಈ ಹಿಂದೆಯೂ ಬಿಬಿಎಂಪಿ ಆಯುಕ್ತರಾಗಿದ್ದವರು.

    ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದಿದ್ರೂ ಬಂತು ಪಾಸಿಟಿವ್ ರಿಪೋರ್ಟ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts