ಬೆಂಗಳೂರು: ಗಣೇಶ ಹಬ್ಬ ಹಿನ್ನೆಲೆಯಲ್ಲಿ ಈಗಾಗಲೇ ಮಾರ್ಗಸೂಚಿ ಹೊರಡಿಸಿರುವ ಬಿಬಿಎಂಪಿ, ಇದೀಗ ಆ. 31ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶಿಸಿದೆ.
ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಅಂಗಡಿಗಳಲ್ಲಿ ಮಾಂಸ ಮಾರಾಟ ಮಾಡಬಾರದು. ಒಂದೇ ವೇಳೆ ಯಾರಾದರೂ ಮಾಂಸ ಮಾರಾಟ ಹಾಗೂ ಪ್ರಾಣಿವಧೆ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಪಶುಪಾಲನೆ ವಿಭಾಗ ಎಚ್ಚರಿಕೆ ನೀಡಿದೆ.
ಹಬ್ಬದ ಹಿನ್ನೆಲೆ ಬೆಂಗಳೂರಿನಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಗಣೇಶನ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸರು ರೂಟ್ ಮಾರ್ಚ್ ಕೈಗೊಂಡಿದ್ದಾರೆ. ಪಶ್ಚಿಮ ವಿಭಾಗ ಪೊಲೀಸ್, ಕೆಎಸ್ಆರ್ಪಿ, ಕ್ವಿಕ್ ರಿಯಾಕ್ಷನ್ ಟೀಂ ಹಾಗೂ ಸ್ವಾಟ್ ಪೊಲೀಸರು ರೂಟ್ ಮಾರ್ಚ್ ಗೆ ಸಿದ್ಧತೆ ನಡೆಸಿದ್ದಾರೆ. ಜೆಜೆ ನಗರದ ಗಲ್ಲಿಗಳಲ್ಲಿ ಪಥಸಂಚಲನ ಮಾಡುವ ಮೂಲಕ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲಿದ್ದಾರೆ.
ಪೊಲೀಸ್ ಅಧಿಕಾರಿ ಆಗಬೇಕೆಂಬ ಕನಸು ಕಂಡಿದ್ದ ಯುವತಿ ದುರಂತ ಅಂತ್ಯ: ಮನಕಲಕುತ್ತೆ ಈಕೆಯ ಕತೆ