More

    ಬಿಸಿಸಿಐ ಮುಖ್ಯಸ್ಥ ಸೌರವ್​ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು

    ಕೋಲ್ಕತ: ಟೀಮ್​ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮುಖ್ಯಸ್ಥ ಸೌರವ್​ ಗಂಗೂಲಿ ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ (ಜ.27) ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಈ ತಿಂಗಳ ಆರಂಭದಲ್ಲಿ ಲಘು ಹೃದಯಾಘಾತಕ್ಕೊಳಗಾಗಿ ಕೋಲ್ಕತದ ವುಡ್​ಲ್ಯಾಂಡ್​ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದಾಗಿನಿಂದ ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬ್ಲಾಕ್​ ಆಗಿದ್ದ ಮೂರು ಕೊರೋನರಿ ಆರ್ಟರಿ(ಪರಿಧಮನಿಯ ಅಪಧಮನಿಗಳು)ಯನ್ನು ಗುರುತಿಸಿ ಬ್ಲಾಕೇಜ್​ ತೆಗೆದುಹಾಕಲು ಸ್ಟೆಂಟ್​ ಅಳವಡಿಸಲಾಗಿತ್ತು. ಅಲ್ಲದೆ, ಮನೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಇಂದು ಮತ್ತೆ ಎದೆನೋವು ಕಾಣಿಸಿಕೊಂಡಿದೆ.

    ಈ ಹಿಂದೆ 9 ವೈದ್ಯರ ತಂಡ ಗಂಗೂಲಿಗೆ ಚಿಕಿತ್ಸೆ ನೀಡಿದ್ದರು. ಗಂಗೂಲಿಯವರ ಕುರಿತು ಮಾತನಾಡಿದ್ದ ವುಡ್‌ಲ್ಯಾಂಡ್ಸ್‌ ಆಸ್ಪತ್ರೆಯ ಎಂಡಿ ಹಾಗೂ ಸಿಇಓ ಡಾ. ರೂಪಾಲಿ ಬಸು, ಮನೆಯಲ್ಲಿಯೂ ಅವರ ಮೇಲೆ ತೀವ್ರ ನಿಗಾ ಇಡಲಾಗುವುದು ಎಂದಿದ್ದರು.

    ಜನವರಿ 2 ರಂದು ತಮ್ಮ ಮನೆಯ ಜಿಮ್‌ನ ಟ್ರೆಡ್‌ ಮಿಲ್‌ನಲ್ಲಿ ಓಡುತ್ತಿದ್ದ ವೇಳೆ ಸೌರವ್‌ ಗಂಗೂಲಿ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಶನಿವಾರ (ಜ.2) ಒಂದು ಗಂಟೆಗೆ ಆಸ್ಪತ್ರೆಗೆ ದಾಖಲಾದಾಗ ಗಂಗೂಲಿ ಅವರ ಪಲ್ಸ್‌ 70/ನಿಮಿಷ, ಬಿಪಿ 130/80 ಎಂಎಂ ಇತ್ತು ಹಾಗೂ ಇತರೆ ಕ್ಲಿನಿಕಲ್‌ ಪ್ಯಾರಾಮೀಟರ್‌ಗಳು ಸಾಮಾನ್ಯ ಸ್ಥಿತಿಯಲ್ಲಿವೆ,” ಎಂದು ವುಡ್‌ಲ್ಯಾಂಡ್ಸ್‌‌ ಆಸ್ಪತ್ರೆಯ ಮೆಡಿಕಲ್‌ ಬುಲೆಟಿನ್‌ನಲ್ಲಿ ತಿಳಿಸಲಾಗಿತ್ತು.

    ಜನವರಿ 7ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರು. ಕರೊನಾ ವೈರಸ್​ ಕೂಡ ನೆಗಿಟಿವ್​ ಆಗಿತ್ತು. ಮೂರರಿಂದ ನಾಲ್ಕು ವಾರಗಳ ವಿಶ್ರಾಂತಿ ಪಡೆದರೆ ಗಂಗೂಲಿ ಸಂಪೂರ್ಣ ಗುಣಮುಖರಾಗಲಿದ್ದಾರೆಂದು ವೈದ್ಯರು ತಿಳಿಸಿದ್ದರು. (ಏಜೆನ್ಸೀಸ್​)

    ಆಸ್ಪತ್ರೆಗೆ ದಾಖಲಾಗಿರುವ ಸೌರವ್​ ಗಂಗೂಲಿಯ ಹೃದಯ ಹೇಗಿದೆ? ಡಾ.ದೇವಿ ಶೆಟ್ಟಿ ಏನು ಹೇಳಿದರು ನೋಡಿ..

    ಸೌರವ್​ ಗಂಗೂಲಿ ಡಿಸ್​ಚಾರ್ಜ್​: ಅಭಿಮಾನಿಗಳಿಗೆ ಕ್ರಿಕೆಟ್​ ತಾರೆ ಏನಂದ್ರು ಕೇಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts