ನವದೆಹಲಿ: ದೇಶಾದ್ಯಂತ ಕೋವಿಡ್-19 ಲಾಕ್ಡೌನ್ ಜಾರಿಯಲ್ಲಿ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿ ಎಟಿಎಂ ಟ್ರ್ಯಾನ್ಸಾಕ್ಷನ್ಗೆ ಹಾಗೂ ಉಳಿತಾಯ ಖಾತೆಯಲ್ಲಿ ಸರಾಸರಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದಿರುವುದಕ್ಕೆ ಬ್ಯಾಂಕ್ಗಳು ವಿಧಿಸುತ್ತಿದ್ದ ದಂಡದಿಂದ ವಿನಾಯಿತಿ ನೀಡಿತ್ತು. ಸರ್ಕಾರದ ಈ ನಿರ್ಧಾರ ಜೂನ್ 30ರವರೆಗೆ ಅನ್ವಯವಾಗುತ್ತದೆ.
ಆದರೆ, ಕೇಂದ್ರ ಸರ್ಕಾರ ಈ ಸೌಲಭ್ಯವನ್ನು ವಿಸ್ತರಿಸಿರುವ ಬಗ್ಗೆಯಾಗಲಿ ಅಥವಾ ವಿಸ್ತರಿಸುವ ಸಾಧ್ಯತೆ ಬಗ್ಗೆಯಾಗಲಿ ಇದುವರೆಗೂ ಸುಳಿವು ಬಿಟ್ಟುಕೊಟ್ಟಿಲ್ಲ. ಆದ್ದರಿಂದ, ಜುಲೈ 1ರಿಂದ ಎಟಿಎಂನಲ್ಲಿ ಹೆಚ್ಚುವರಿ ಟ್ರ್ಯಾನ್ಸಾಕ್ಷನ್ ಮಾಡುವ ಮುನ್ನ ಹಾಗೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದವರು ಎಚ್ಚರವಹಿಸುವುದು ಒಳಿತು. ಇಲ್ಲವಾದರೆ, ವಿನಾಕಾರಣ ಬ್ಯಾಂಕ್ಗಳಿಗೆ ದಂಡ ಕಟ್ಟಬೇಕಾಗುತ್ತದೆ.
ಕೋವಿಡ್-19 ಹಿನ್ನೆಲೆಯಲ್ಲಿ ಮಾರ್ಚ್ 24ರ ಮಧ್ಯರಾತ್ರಿಯಿಂದ ಜಾರಿಗೆ ಬಂದ ಲಾಕ್ಡೌನ್ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಉಳಿತಾಯ ಖಾತೆ ಹೊಂದಿರುವವರು ತಮ್ಮ ಖಾತೆಯಲ್ಲಿ ಸರಾಸರಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಹಾಗೂ ಯಾವುದೇ ಬ್ಯಾಂಕ್ನ ಎಟಿಎಂನಿಂದ ಹೆಚ್ಚುವರಿ ಟ್ರ್ಯಾನ್ಸಾಕ್ಷನ್ ಮಾಡಿದರೆ ಜೂನ್ 30ರವರೆಗೆ ದಂಡ ವಿಧಿಸದಂತೆ ಬ್ಯಾಂಕ್ಗಳಿಗೆ ಸೂಚಿಸಿದ್ದರು. ಇದರಿಂದ ಕೋಟ್ಯಂತರ ಗ್ರಾಹಕರಿಗೆ ಅನುಕೂಲವಾಗಿತ್ತು.
ಸಾಕುನಾಯಿಯನ್ನು ಕರೆದೊಯ್ಯಲು ಬಾಡಿಗೆ ವಿಮಾನದಲ್ಲಿ ಬೆಂಗಳೂರಿಗೆ ಬಂದು ಮರಳಿದರು!