ಬೆಂಗಳೂರು: ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕರೊನಾ ಸೋಂಕು ಇದೀಗ ಕಳೆದ ವರ್ಷ ಉಂಟು ಮಾಡಿದ ಅವಾಂತರವನ್ನೇ ಸೃಷ್ಟಿಸುವ ಸಾಧ್ಯತೆಗಳು ಗೋಚರಿಸುತ್ತಿವೆ. ಈಗಾಗಲೇ ಬೆಡ್ ಸಿಗುತ್ತಿಲ್ಲ, ಸೋಂಕಿತರ ಶವಸಂಸ್ಕಾರಕ್ಕೂ ಕ್ಯೂ ಎಂಬ ಸುದ್ದಿಗಳು ಕೇಳಿಬಂದಿವೆ.
ಈ ಮಧ್ಯೆ ಸೋಂಕು ಹೆಚ್ಚುತ್ತಿರುವ ಸಂಬಂಧ ರಾಜ್ಯದ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಆರಂಭಿಕ ಹಂತದಲ್ಲಿ ಕಾಣಿಸಿಕೊಂಡ ಕರೊನಾಗಿಂತ ಕರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿದ್ದು, ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವ ಹೈಕೋರ್ಟ್ ಸಿಬ್ಬಂದಿಗೂ ಹಾಸಿಗೆ ಸಿಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.
ಇದನ್ನೂ ಓದಿ: ರಾಜಧಾನಿಯಲ್ಲಿ ಕೋವಿಡ್ ಶವ ಸಂಸ್ಕಾರಕ್ಕೂ ಕ್ಯೂ! ಚಿತಾಗಾರದ ಮುಂದೆ ಗಂಟೆಗಟ್ಟಲೆ ನಿಂತ ಆಂಬ್ಯುಲೆನ್ಸ್
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಸೂಚನೆ ಕೊಟ್ಟಿರುವ ಸರ್ಕಾರ, ಹಾಸಿಗೆಗಳ ಕೊರತೆ ಬಗ್ಗೆ ಸರ್ಕಾರ ಉತ್ತರಿಸಬೇಕು ಎಂದು ಹೇಳಿದೆ. ಮಾತ್ರವಲ್ಲ ಖಾಸಗಿ ಆಸ್ಪತ್ರೆಗಳ ಶುಲ್ಕದ ಬಗ್ಗೆ, ಆ್ಯಂಬುಲೆನ್ಸ್ಗಳ ಲಭ್ಯತೆ ಬಗ್ಗೆ ಹಾಗೂ ಸೋಂಕಿತರ ಅಂತ್ಯಕ್ರಿಯೆಗೆ ಕೈಗೊಂಡ ಕ್ರಮಗಳ ಬಗ್ಗೆಯೂ ವಿವರಣೆ ನೀಡುವಂತೆ ಸೂಚಿಸಿದೆ. ಅಲ್ಲದೆ ಜನರ ತೊಂದರೆಗೆ ಸ್ಪಂದಿಸಲು ಉನ್ನತ ಸಮಿತಿ ರಚಿಸಲು ಸಾಧ್ಯವೇ? ಎಂದು ಕೇಳಿರುವ ಹೈಕೋರ್ಟ್, ನಾಗರಿಕರು ತಮ್ಮ ಕಷ್ಟ ಹೇಳಿಕೊಳ್ಳಲು ವೇದಿಕೆ ಕಲ್ಪಿಸುವಂತೆ ಹಾಗೂ ಹೆಲ್ಪ್ಲೈನ್ಗಳನ್ನು ಮತ್ತೆ ಆರಂಭಿಸಲು ಕ್ರಮಕೈಗೊಳ್ಳಲು ನಿರ್ದೇಶನ ನೀಡಿದೆ.
ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಮೂರನೇ ಮಹಡಿಯಿಂದ ಜಿಗಿದ ಯುವತಿ; ಇಲ್ಲಿ ಹೆಣ್ಣಿಗೆ ಹೆಣ್ಣೇ ಶತ್ರು!