ಬೆಂಗಳೂರು: ಹಳೇ ಹಾಸಿಗೆಗಳನ್ನು ಮಾರಾಟ ಮಾಡಲು ಹೋದ ಯುವತಿಯರಿಬ್ಬರು ವಂಚಕರ ಜಾಲಕ್ಕೆ ಸಿಲುಕಿ ನಷ್ಟ ಅನುಭವಿಸಿದ್ದಾರೆ.
ಕಸವನಹಳ್ಳಿ ನಿವಾಸಿ ತೇಜಸ್ವಿ ಸಿಂಗ್ ಮತ್ತು ಸಪ್ನಾ ವಂಚನೆಗೊಳಗಾದವರು. ಇವರು ಕೊಟ್ಟ ದೂರಿನ ಮೇರೆಗೆ ಕನ್ಹಯ್ಯ ಕುಮಾರ್ ಮತ್ತು ಉದಯ್ಭಾನ್ ಸಿಂಗ್ ಎಂಬುವರ ವಿರುದ್ಧ ವೈಟ್ಫೀಲ್ಡ್ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.
ತೇಜಸ್ವಿ ಸಿಂಗ್ ಮತ್ತು ಸಪ್ನಾ ಅವರು ಹಳೇ ಹಾಸಿಗೆಗಳನ್ನು ಮಾರಾಟ ಮಾಡಲು ಒಎಲ್ಎಕ್ಸ್ನಲ್ಲಿ ಜಾಹೀರಾತು ಪ್ರಕಟಿಸಿದ್ದರು. ಇದನ್ನು ಗಮನಿಸಿ ಕರೆ ಮಾಡಿದ್ದ ಅಪರಿಚಿತರು, ಹಾಸಿಗೆಗಳನ್ನು ಖರೀದಿಸುತ್ತೇವೆ. ಆನ್ಲೈನ್ ಮೂಲಕ ಹಣ ಸಂದಾಯ ಮಾಡುತ್ತೇವೆ ಎಂದೇಳಿ ಮೊಬೈಲ್ಗೆ ಕ್ಯೂಆರ್ ಕೋಡ್ ಕಳುಹಿಸಿದ್ದರು.
ಅದನ್ನು ಸ್ಕ್ಯಾನ್ ಮಾಡಿದ ತೇಜಸ್ವಿ ಸಿಂಗ್ರ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ 46,900 ರೂ. ಬೇರೆ ಖಾತೆಗೆ ವರ್ಗಾವಣೆಯಾಗಿದೆ. ಇದೇ ರೀತಿ ಸಪ್ನಾರ ಬ್ಯಾಂಕ್ ಖಾತೆಯಿಂದಲೂ 60 ಸಾವಿರ ರೂ. ಕಡಿತವಾಗಿದೆ. ಈ ಬಗ್ಗೆ ವಿಚಾರಿಸಲು ಕರೆ ಮಾಡಿದಾಗ ವಂಚಕರು ಸಂಪರ್ಕಕ್ಕೆ ಸಿಕ್ಕಿಲ್ಲ. ಸೈಬರ್ ವಂಚನೆ ಎಂಬುದು ಗೊತ್ತಾಗಿ ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಕನ ಮನೆಗೆ ಬಾರದ ಬಾವ, ಸಿಟ್ಟಿಗೆದ್ದ ಬಾಮೈದ ಮಹಿಳೆಯನ್ನು ಕೊಂದುಬಿಟ್ಟ!
ತನ್ನದೇ ಸೆಕ್ಸ್ ವಿಡಿಯೋ ಮಾರುತ್ತಿದ್ದ ಬಸ್ ಕಂಡಕ್ಟರ್! ಪರಸ್ತ್ರೀಯರೊಂದಿಗೂ ಲೈಂಗಿಕ ಸಂಪರ್ಕ, 65 ವಿಡಿಯೋ ವಶ