More

    ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

    ಅಕ್ಕಿಆಲೂರ: ಸಮೀಪದ ಡೊಳ್ಳೇಶ್ವರ ಗ್ರಾಮದಲ್ಲಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.

    ಅಕ್ಕಿಆಲೂರಿನ ನಿವಾಸಿ ಅಬ್ದುಲ್​ಕರೀಂ ಬೇಪಾರಿ (32) ಬಂಧಿತ ವ್ಯಕ್ತಿ. ಭಾನುವಾರ ಬೆಳಗ್ಗೆ ಡೊಳ್ಳೇಶ್ವರ ಗ್ರಾಮದಲ್ಲಿ ಗೋ ಮಾಂಸವನ್ನು 1 ಕೆಜಿ, 2 ಕೆಜಿ ಪಾಕೆಟ್ ಮಾಡಿ ಚೀಲದಲ್ಲಿ ತುಂಬಿಕೊಂಡು ಮಾರಾಟ ಮಾಡುತ್ತಿದ್ದ. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಾಂಸ ಖರೀದಿಗೆ ಮುಗಿಬಿದ್ದಿದ್ದಾರೆ. ಇದರಿಂದ ಆತಂಕಗೊಂಡ ಗ್ರಾಮಸ್ಥರು, ಗೋ ಮಾಂಸ ಮಾರಾಟ ಮಾಡಲು ಬಂದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಿಎಸ್​ಐ ಮಂಜುನಾಥ ಮಾಂಸ ವಶಪಡಿಸಿಕೊಂಡು, ವ್ಯಕ್ತಿಯನ್ನು ವಶಕ್ಕೆ ಪಡೆದರು. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಗಿರೀಶ ರೆಡ್ಡೆರ, ಪೇದೆ ಲಕ್ಷ್ಮಣ ಪಾಟೀಲ ಇದ್ದರು.

    ಮಾಂಸದ ಪಾಕೆಟ್​ಗಳನ್ನು ರಸ್ತೆಗೆ ಸುರಿದು, ‘ನಮ್ಮೂರಿಗೆ ಬರಬೇಡ ಎಂದು ಎಷ್ಟು ಬಾರಿ ಹೇಳಬೇಕು’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts