ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರಿನಲ್ಲೇ ವಿದ್ಯಾರ್ಥಿಗಳು ಬಸ್ಗಾಗಿ ಪರದಾಡುವಂತಾಗಿದೆ. ಸರಿಯಾದ ಸಮಯಕ್ಕೆ ಬಸ್ ಇಲ್ಲದೆ, ಶಾಲಾ-ಕಾಲೇಜಿಗೆ ತೆರಳಲು ಖಾನಾಪುರ ತಾಲೂಕಿನ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.
ಇಷ್ಟೇ ಅಲ್ಲದೆ, ಬಸ್ಸಿನ ಕೊರತೆಯಿಂದಾಗಿ ಸದ್ಯ ಇರುವ ಬಸ್ನಲ್ಲಿ ವಿದ್ಯಾರ್ಥಿಗಳನ್ನು ಕುರಿ ತುಂಬಿದ ಹಾಗೇ ತುಂಬಿ ಕರೆದೊಯ್ಯುತ್ತಿದ್ದಾರೆ. ಇದರ ಪರಿಣಾಮ ಇಂದು ಕಿಕ್ಕಿರಿದ ಬಸ್ನಲ್ಲಿ ಪ್ರಯಾಣಿಕರ ಮಧ್ಯೆ ಸಿಲುಕಿ ಉಸಿರುಗಟ್ಟಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.
ಇದನ್ನೂ ಓದಿರಿ: ಇನ್ಮುಂದೆ ನಾನಾಯಿತು ನನ್ನ ಪಾಡಾಯಿತು…; ಜಗ್ಗೇಶ್
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿಷಯ ತಿಳಿದ ವಿದ್ಯಾರ್ಥಿಗಳ ಪಾಲಕರು ಹಾಗೂ ವಿದ್ಯಾರ್ಥಿಗಳು ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಮರ್ಪಕವಾಗಿ ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ವಿದ್ಯಾರ್ಥಿಗಳ ಆಗ್ರಹಿಸಿದ್ದಾರೆ. ಬೆಳಗ್ಗೆ 7-8 ಕ್ಕೆ ರಾಮನಗರ – ಖಾನಾಪೂರ ಮತ್ತು ಮಧ್ಯಾಹ್ನ 2-3 ಕ್ಕೆ ಖಾನಾಪೂರ – ರಾಮನಗರ ಬಸ್ ಬಿಡಲು ಆಗ್ರಹಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಬೆಳಗಾವಿ: ವೇಶ್ಯಾವಾಟಿಕೆ ಸಂತ್ರಸ್ತೆಯರನ್ನು ಪಾಲಕರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದ ಪೊಲೀಸರು!
ಸ್ಫೋಟಕಗಳ ಜತೆ ಹುಡುಗಾಟ; ಎಚ್ಚೆತ್ತುಕೊಳ್ಳದ ಸರ್ಕಾರ, ಶಿವಮೊಗ್ಗ ಬಳಿಕ ಚಿಕ್ಕಬಳ್ಳಾಪುರದಲ್ಲೂ ದುರಂತ..
ಕಿದ್ವಾಯಿ-ನಿಮ್ಹಾನ್ಸ್ ಮಾದರಿ ಇನ್ನಷ್ಟು ಆಸ್ಪತ್ರೆ; ರಾಜ್ಯದಲ್ಲಿ ವಲಯವಾರು ಕೇಂದ್ರಗಳ ಆರಂಭಕ್ಕೆ ಸಿಎಂ ನಿರ್ಧಾರ