ಬೆಳಗಾವಿ: ವಿವಿಧ ಸಮಸ್ಯೆಗಳನ್ನು ತೆಗೆದುಕೊಂಡು ಠಾಣೆಗಳಿಗೆ ಬರುವ ಸಾರ್ವಜನಿಕರೊಂದಿಗೆ ಪೊಲೀಸರು ಸಮನ್ವಯ ದಿಂದ ವರ್ತಿಸಬೇಕು ಎಂದು ಎಸ್ಪಿ ಡಾ. ಸಂಜೀವ ಪಾಟೀಲ ಸೂಚಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಪೋನ್ ಇನ್ ಕಾರ್ಯಕ್ರದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ಮಾತನಾಡಿದರು. ಠಾಣೆಗೆ ಬಂದು ಸಾರ್ವಜನಿಕರು ದೂರು ಕೊಟ್ಟ ರೆ ತಕ್ಷಣವೇ ದೂರು ಸ್ವೀಕರಿಸಿ ಕ್ರಮ ವಹಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದವರೆ ಮೇಲೆ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿರು.