More

    ಮಂತ್ರಿಗಿರಿಗಾಗಿ ದೇವರ ಮೋರೆ ಹೋದ ರಮೇಶ್ ಜಾರಕಿಹೊಳಿ: ಬೆಳಗಾವಿ ಸಾಹುಕಾರನ ಟೆಂಪಲ್​ ರನ್​

    ಬೆಳಗಾವಿ: ಕಳೆದುಕೊಂಡ ಮಂತ್ರಿಗಿರಿಯನ್ನು ಮತ್ತೆ ಪಡೆಯಲು ಹರಸಾಹಸ ಪಡುತ್ತಿರುವ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಟೆಂಪಲ್​ ರನ್​ ಮುಂದುವರಿಸಿದ್ದಾರೆ.

    ಕಳೆದ ವಾರ ಪುತ್ರ ಅಮರನಾಥ ಸೇರಿದಂತೆ ಆಪ್ತರೊಂದಿಗೆ ಕೇದಾರನಾಥನ ದರ್ಶನ ಮಾಡಿದ್ದ ಜಾರಕಿಹೊಳಿ, ಇದೀಗ ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಪಡೆದಿದ್ದಾರೆ. ನಿನ್ನೆ ಶುಕ್ರವಾರ ಹಿನ್ನೆಲೆಯಲ್ಲಿ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಅಂದಹಾಗೆ ಕೊಲ್ಲಾಪುರ ಮಹಾಲಕ್ಷ್ಮಿ, ರಮೇಶ್ ಜಾರಕಿಹೊಳಿ ಅವರ ಮನೆದೇವರು. ಭೇಟಿ ವೇಳೆ ಮಾಜಿ ಶಾಸಕ ಸಂಜಯ ಪಾಟೀಲ್ ಸಾಥ್​ ನೀಡಿದರು. ಸಂಪುಟ ಸೇರ್ಪಡೆಗೆ ರಮೇಶ್​ ಜಾರಕಿಹೊಳಿ ತೆರೆ ಮರೆಯಲ್ಲಿ ತುಂಬಾ ಕಸರತ್ತು ನಡೆಸುತ್ತಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹೆಸರು ಕೇಳಿಬಂದ ಬಳಿಕ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. (ದಿಗ್ವಿಜಯ ನ್ಯೂಸ್​)

    ಜಾಸ್ತಿ ಹಣ ಕೊಟ್ಟರೆ ಓಕೆ! ಸೌತ್​ ಬ್ಯೂಟಿ ಅಮಲಾ ಪೌಲ್ ಕುರಿತ ಬಿಸಿ ಬಿಸಿ ಸುದ್ದಿ ಇದು​

    ಹಿಮಪಾತದಿಂದ ದಾರಿತಪ್ಪಿದ್ದ 17 ಚಾರಣಿಗರಲ್ಲಿ 11 ಮಂದಿ ಶವವಾಗಿ ಪತ್ತೆ: ಉತ್ತರಾಖಂಡದಲ್ಲಿ ದುರ್ಘಟನೆ

    ಭಾರತದಲ್ಲೂ ಹೈಪರ್​ಸಾನಿಕ್ ಅಣ್ವಸ್ತ್ರ ಕ್ಷಿಪಣಿ ಅಭಿವೃದ್ಧಿ; ಚೀನಾಕ್ಕೆ ಸೆಡ್ಡು ಹೊಡೆಯಲು ಹಲವು ದೇಶಗಳ ಯತ್ನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts