ಬೆಳಗಾವಿ ಯೋಧನ ವಿರುದ್ಧದ ಕೇಸ್ ಹಿಂತೆಗೆದುಕೊಳ್ಳುತ್ತಾ ರಾಜ್ಯ ಪೊಲೀಸ್ ಇಲಾಖೆ?

blank

ನವದೆಹಲಿ/ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸಿಆರ್‌ಪಿಎ್ ಕೋಬ್ರಾ ಕಮಾಂಡೋ ಸಚಿನ್ ಸುನೀಲ್ ಸಾವಂತ್ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿ ಕಬ್ಬಿಣದ ಸರಪಳಿಯಿಂದ ಕಟ್ಟಿ ಹಾಕಿದ ಪ್ರಕರಣಕ್ಕೆ ಮಂಗಳ ಹಾಡಲು ರಾಜ್ಯ ಪೊಲೀಸ್ ನಿರ್ಧರಿಸಿದೆಯೇ?

ಹೌದು ಎನ್ನುತ್ತವೆ ವಿಶ್ವಸನೀಯ ಮೂಲಗಳು. ಸಚಿನ್ ವಿರುದ್ಧ ದಾಖಲಿಸಲಾಗಿರುವ ಕೇಸನ್ನು ಹಿಂತೆಗೆದುಕೊಂಡು ಸಿಆರ್‌ಪಿಎಫ್ ಮತ್ತು ಪೊಲೀಸ್ ಇಲಾಖೆ ನಡುವೆ ಉಂಟಾಗಿರುವ ತ್ವೇಷಮಯ ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ತೀರ್ಮಾನಿಸಿದ್ದಾರೆ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಕೇಸ್ ಹಿಂತೆಗೆದುಕೊಳ್ಳುವ ಸಂಬಂಧ ಈಗಾಗಲೇ ಸಿಆರ್‌ಪಿಎಫ್ ಅಧಿಕಾರಿಗಳಿಗೆ ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕರೇ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಧ್ಯೆ, ಪ್ರಕರಣದ ಸಂಬಂಧ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡು ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ವಕೀಲ ಜಿ.ಆರ್. ಮೋಹನ್ ಇ-ಮೇಲ್ ಮೂಲಕ ಮನವಿ ಮಾಡಿದ್ದಾರೆ.

‘‘ಯೋಧ ಸಚಿನ್ ವಿರುದ್ಧ ಸದಲಗ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 323 ಮತ್ತು 345 ಅಡಿಯಲ್ಲಿ ಎಫ್​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸುತ್ತಿಲ್ಲ. ಆದರೆ, ಯೋಧನ ಕೈ-ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಕಟ್ಟಿ ಹಾಕಿ ನೆಲದ ಮೇಲೆ ಕೂರಿಸಿದ ಪೊಲೀಸರ ನಡೆ ಆಕ್ಷೇಪಾರ್ಹ’’ ಎಂದು ದೂರಿದ್ದಾರೆ.

ಪ್ರೇಮ್ ಕುಮಾರ್ ಶುಕ್ಲಾ ಹಾಗೂ ದೆಹಲಿ ಸರ್ಕಾರ ನಡುವಿನ ಪ್ರಕರಣ, ಸಿಟಿಜನ್ ಫಾರ್ ಡೆಮಾಕ್ರಸಿ ಹಾಗೂ ಅಸ್ಸಾಂ ಸರ್ಕಾರದ ನಡುವಿನ ಪ್ರಕರಣದಲ್ಲಿ ಕೈಕೋಳ ತೊಡಗಿಸುವ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಸದಲಗ ಪೊಲೀಸರು ಉಲ್ಲಂಸಿದ್ದಾರೆ. ಆದ್ದರಿಂದ ಈ ಸಂಬಂಧ ಸ್ವಯಂಪ್ರೇರಿತ ಪಿಐಎಲ್ ದಾಖಲಿಕೊಂಡು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಬಿಸಿಲು ಜಾಸ್ತಿ ಇದ್ರೆ ಕರೊನಾ ತನ್ನಿಂತಾನೇ ಸಾಯುತ್ತಾ? ಮಹಾರಾಷ್ಟ್ರ, ಕರ್ನಾಟಕದಲ್ಲಿ ನಡೆದ ಅಧ್ಯಯನ ಏನು ಹೇಳುತ್ತೆ?

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…