ಬೆಳಗಾವಿ: ಸಿಆರ್ಪಿಎಫ್ ಯೋಧ ಸಚಿನ್ ಸಾವಂತ್ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಕರ್ತವ್ಯ ಲೋಪ ಆರೋಪದಡಿ ಸದಲಗಾ ಸಬ್ ಇನ್ಸ್ಪೆಕ್ಟರ್ರನ್ನು ಅಮಾನತು ಮಾಡಲಾಗಿದೆ.
ಯೋಧನ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡದ ಹಿನ್ನಲೆಯಲ್ಲಿ ಪಿಎಸ್ಐ ಅನಿಲ್ ಕುಮಾರ್ ಸಸ್ಪೆಂಡ್ ಆಗಿರುವುದಾಗಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ತಿಳಿಸಿದರು. ಪ್ರಕರಣ ಕುರಿತು ತನಿಖೆ ಮುಂದುವರೆದಿದೆ ಎಂದರು.
ಯೋಧ ಸಚಿನ್ ಬಿಡುಗಡೆಯಾದ ಬಳಿಕ ಆತನಿಂದ ಹೇಳಿಕೆ ಪಡೆದಿದ್ದು, ಪ್ರಾಥಮಿಕ ತನಿಖೆಯಲ್ಲಿ ಪಿಎಸ್ಐ ಅನಿಲ್ಕುಮಾರ್ ಕರ್ತವ್ಯ ಲೋಪ ಕಂಡುಬಂದಿರುವುದರಿಂದ ಅಮಾನತು ಮಾಡಲಾಗಿದೆ ಎಂದು ಸುಹಾಸ್ ಹೇಳಿದ್ದಾರೆ.
ಘಟನೆ ನಡೆದ ದಿನವೇ ಸಿಆರ್ಪಿಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಮಾರನೇ ದಿನ ಪತ್ರ ಬರೆದು ಸಿಆರ್ಪಿಎಫ್ ಅಧಿಕಾರಿಗಳಿಗೆ ರವಾನಿಸಲಾಗಿತ್ತು. ತನಿಖೆ ಮುಂದುವರೆದಿದ್ದು, ಪೇದೆಗಳ ತಪ್ಪು ಮಾಡಿರುವ ಕುರಿತು ವಿಚಾರಣೆ ನಡೆದಿದೆ ಎಂದು ಸುಹಾಸ್ ವಿವರಣೆ ನೀಡಿದರು. (ದಿಗ್ವಿಜಯ ನ್ಯೂಸ್)
ಬೆಳಗಾವಿ ಯೋಧನ ವಿರುದ್ಧದ ಕೇಸ್ ಹಿಂತೆಗೆದುಕೊಳ್ಳುತ್ತಾ ರಾಜ್ಯ ಪೊಲೀಸ್ ಇಲಾಖೆ?