ಬೆಳಗಾವಿ: ಎಲ್ಲಿಯಾದರೂ ದನ ಕಾಯೋಕೆ ಹೋಗಿ ಎಂದು ರೋಗಿಗಳ ಎದುರಲ್ಲೇ ಬಿಮ್ಸ್ ವೈದ್ಯರಿಗೆ ಸಚಿವ ಡಾ.ಸುಧಾಕರ್ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು.
ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದ ಬಳಿಕ ಜಿಲ್ಲಾ ಆಸ್ಪತ್ರೆಯ ವಾರ್ಡ್ಗಳಲ್ಲಿ ಸಂಚರಿಸಿದ ಸಚಿವರು ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಕೆಲ ರೋಗಿಗಳು, ಸಮಯಕ್ಕೆ ಸರಿಯಾಗಿ ವೈದ್ಯರು ಬರುತ್ತಿಲ್ಲ. ಸ್ವಚ್ಛತೆ ಇಲ್ಲ. ಆಸ್ಪತ್ರೆಯಲ್ಲಿ ವಿಪರೀತ ಸೊಳ್ಳೆ ಕಾಟ ಇದೆ ಸರ್… ಎನ್ನುತ್ತ ಗೋಳಾಡಿದರು.
ವೈದ್ಯರು ಮತ್ತು ಆಸ್ಪತ್ರೆ ವಿರುದ್ಧ ರೋಗಿಗಳು ದೂರಿನ ಸುರಿಮಳೆ ಸುರಿಸುತ್ತಿದ್ದಂತೆ ಕೆಂಡಾಮಂಡಲವಾದ ಸಚಿವ ಸುಧಾಕರ್, ಆಸ್ಪತ್ರೆ ಸಿಬ್ಬಂದಿ ಮತ್ತು ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ಹಾಗೂ ವೈದ್ಯರ ವಿರುದ್ಧ ಹರಿಹಾಯ್ದರು.
ಸ್ವಚ್ಛತೆಗಾಗಿ ಪ್ರತಿ ತಿಂಗಳು 6 ಲಕ್ಷ ರೂ. ಹಣ ಖರ್ಚು ಮಾಡುತ್ತೇವೆ. ಆದರೂ ಕ್ಲೀನಿಂಗ್ ಇಲ್ಲ ಅಂದ್ರೆ ಹೇಗೆ? ನಿಮ್ಮನ್ನೇ ಬೇರೆ ಕಡೆ ಕಳುಹಿಸಿ ಕೊಡ್ಲಾ? ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.
ನ್ಯಾಯ ಬೇಡಿ ಮನೆ ಬಾಗಿಲಿಗೆ ಬಂದ ಶಾಸಕನಿಗೆ ಶಿಸ್ತು ಸಮಿತಿಯತ್ತ ಬೆರಳು ತೋರಿಸಿ ಡಿಕೆಶಿ ಎಸ್ಕೇಪ್!
ಇದು ಅಂತಿಂಥ ಬೇಟೆಯಲ್ಲ! ದ್ವಿಚಕ್ರ ವಾಹನದಲ್ಲಿತ್ತು ಬರೋಬ್ಬರಿ 3 ಕೋಟಿ ಮೌಲದ್ಯ ಚಿನ್ನಾಭರಣ