ಬಳ್ಳಾರಿ: ಕಾರು ಪಲ್ಟಿಯಾಗಿ ಕರ್ತವ್ಯನಿರತ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರು ಸಾವಿಗೀಡಾಗಿರುವ ಘಟನೆ ಕುರಗೋಡು ತಾಲೂಕಿನ ಕಲ್ಲುಕಂಭ ಗ್ರಾಮದ ಬಳಿ ಬುಧವಾರ ನಡೆದಿದೆ.
ಇದನ್ನೂ ಓದಿ: ಮಕ್ಕಳಿಗೆ ಮೊಬೈಲ್ ಗಾಳ! ವಾಟ್ಸ್ಆಪ್ ಗ್ರೂಪಲ್ಲಿ ಅಶ್ಲೀಲ ದೃಶ್ಯ ಕಳುಹಿಸಿ ಬೆದರಿಕೆ?
ಪ್ರಲ್ಹಾದ್ (55) ಮೃತ ಎಎಸ್ಐ. ಇವರು ಕುರುಗೋಡು ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಕರ್ತವ್ಯದ ಮೇಲೆ ತೆರಳುವಾಗ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ರಸ್ತೆ ಬಳಿ ಇದ್ದ ಮೊರಿಗೆ ಡಿಕ್ಕಿ ಹೊಡೆದು, ನಂತರ ಅಂಜುರ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಎಎಸ್ಐ ಪ್ರಲ್ಹಾದ್ ಅವರು ಬಳ್ಳಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ: ಮಹಿಳೆಯ ಶವದ ಜತೆ ಸಾರ್ವಜನಿಕ ಸ್ಥಳದಲ್ಲಿ ಸಂಭೋಗ: ಆರೋಪಿ ಬಂಧಿಸಿದ ಅಧಿಕಾರಿಗಳಿಗೆ ಕಾದಿತ್ತು ಶಾಕ್!
ಖಾಸಗಿ ಡ್ರೈವರ್ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ಪತಿಯಿಂದ ದೂರವಾಗಿದ್ದ ವಿವಾಹಿತೆಯೊಂದಿಗೆ ಯುವತಿ ಆತ್ಮಹತ್ಯೆ: ಪೊಲೀಸ್ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ!