blank

ನೋಂದಣಿ ಆರಂಭಿಸಲು ಆಗ್ರಹ

ಬಳ್ಳಾರಿ ; ಬೆಂಬಲ ಬೆಲೆಯಡಿ ಹಿಂಗಾರು ಜೋಳ ಖರೀದಿ ನೋಂದಣಿ ಆರಂಭಿಸಲು ಆಗ್ರಹಿಸಿ ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಕನ್ನಡ ನಾಡು ರೈತ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಯಿತು.
ಕನ್ನಡನಾಡು ರೈತ ಸಂಘದ ರಾಜಾಧ್ಯಕ್ಷ ಈಶ್ವರಪ್ಪ ಮಾತನಾಡಿ, ಹಿಂಗಾರು ಜೋಳ ಕಟಾವು ಮಾಡಿ 4 ತಿಂಗಳು ಕಳೆದಿವೆ. ಆದರೆ ಸರ್ಕಾರವು ರಜೆಯ ಸಂದರ್ಭದಲ್ಲಿ (ಅಂಬೇಡ್ಕರ್ ಜಯಂತಿಯಂದು) ರೈತರಿಗೆ ಯಾವುದೇ ರೀತಿಯ ಮಾಹಿತಿ ನೀಡದೆ, 382 ರೈತರಿಂದ ಮಾತ್ರ ಜೋಳ ಕೊಂಡುಕೊಳ್ಳುವುದರ ಬಗ್ಗೆ ಅನುಮತಿ ನೀಡಿದೆ. ಇತರೆ ರೈತರ ಜೋಳವನ್ನು ತಿರಸ್ಕೃತ ಮಾಡಿದೆ ಎಂದು ತಿಳಿಸಿದರು.
ಏ.15 ರಂದು ಎಪಿಎಂಸಿ ಯಾರ್ಡ್ ಆವರಣದಲ್ಲಿ ಪ್ರತಿಭಟನೆ ಮಾಡಿದಾಗ, ಎಡಿಸಿ ಪ್ರತಿಭಟನಾ ಸ್ಥಳಕ್ಕೆ ಭೇಟಿ, ರೈತರಿಗೆ ಅನುಕೂಲ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ.ಕೇಂದ್ರ ಸರ್ಕಾರವು ಹೊರಡಿಸಿರುವ ಜೋಳದ ಬೆಂಬಲ ಬೆಲೆಯ ಕಾನೂನು ವ್ಯವಸ್ಥೆ ತಿರಸ್ಕರಿಸಿ, ಅಕ್ರಮ ಎಸಗಿರುವ ಕಾರ್ಯ ನಿರ್ವಾಹಣಾಧಿಕಾರಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು. ಹೊಸದಾಗಿ ನೋಂದಣಿ ಮಾಡಿಕೊಂಡು ರೈತರಿಗೆ ಸೂಕ್ತವಾದ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

blank
blank
Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…