More

    ದೇವಸ್ಥಾನಕ್ಕೆ ತೆರಳುತ್ತಿದ್ದವರ ಎದುರಿಗೆ ಬಂದ ಜವರಾಯ: ದಂಪತಿ ದಾರುಣ ಸಾವು

    ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಹೊಸಪೇಟೆಯ ಅನಂತಶಯನ ದೇವಸ್ಥಾನದ ರಸ್ತೆಯಲ್ಲಿ ನಡೆದಿದೆ.

    ಹೊಸಪೇಟೆ ನಿವಾಸಿಗಳಾದ ರಾಜು ಹಾಗೂ ಪತ್ನಿ ಶಾಂತ ಮೃತ ದುರ್ದೈವಿಗಳು. ದಂಪತಿ ಟಿವಿಎಸ್​ ಎಕ್ಸಲ್​ನಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದು ತೀವ್ರ ರಕ್ತಸ್ರಾವವಾಗಿ ದಂಪತಿ ಪ್ರಾಣಬಿಟ್ಟಿದ್ದಾರೆ.

    ಇದನ್ನೂ ಓದಿ: ಅಮ್ಮ ಎಲ್ಲಿ ಎಂದು ಮಗಳನ್ನು ಪ್ರಶ್ನಿಸಿದ ವ್ಯಕ್ತಿಗೆ ಗೊತ್ತಾಯ್ತು ಪತ್ನಿಯ ಅಕ್ರಮ ಸಂಬಂಧ!

    ಘಟನಾ ಸ್ಥಳಕ್ಕೆ ಹೊಸಪೇಟೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಂಪತಿ ಕಳೆದುಕೊಂಡು ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್​)

    ಕಾಲಿನಿಂದ ಒದ್ದ, ಹೊಟ್ಟೆಗೆ, ಮುಖಕ್ಕೆ ಗುದ್ದಿದ- ಕ್ಯಾಮೆರಾಮನ್​ನಿಂದ ಪತ್ರಕರ್ತನ ಮೇಲೆ ಹಲ್ಲೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts