More

    ಜೋಶಿ ಗೆಲ್ಲಿಸಲು ಬೆಲ್ಲದ ಮನವಿ

    ವಿಜಯವಾಣಿ ಸುದ್ದಿಜಾಲ ಧಾರವಾಡ
    ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು. ಹೀಗಾಗಿ ಈ ಬಾರಿ ಎಲ್ಲರೂ ಬಿಜೆಪಿ ಅಭ್ಯಥಿ೯ಗೆ ಬೆಂಬಲ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಮನವಿ ಮಾಡಿದರು.
    ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಗೆಲ್ಲಾಪುರ ಗ್ರಾಮದಲ್ಲಿ ಗುರುವಾರ ಮತದಾರರನ್ನು ಭೇಟಿ ಮಾಡಿ ಬಿಜೆಪಿ ಅಭ್ಯಥಿ೯ ಪ್ರಲ್ಹಾದ ಜೋಶಿ ಪರ ಮತಯಾಚಿಸಿದರು.
    ಜಗತ್ತನ್ನು ಕಾಡಿದ ಕರೊನಾ ಸಂಕಷ್ಟದಲ್ಲಿ ಎಲ್ಲ ಭಾರತೀಯರಿಗೂ ಲಸಿಕೆ ನೀಡುವ ಕೆಲಸವನ್ನು ನರೇಂದ್ರ ಮೋದಿ ಸರ್ಕಾರ ಯಶಸ್ವಿಯಾಗಿ ನಡೆಸಿತು. ಅಲ್ಲದೆ ಅಗತ್ಯವಿರುವ ಅನ್ಯ ದೇಶಗಳಿಗೂ ಲಸಿಕೆ ಕೊಡಲಾಯಿತು. ದೇಶದಲ್ಲಿ ಇಂದು ನಿತ್ಯ ನೂರಾರು ಕಿ.ಮೀ.ನಷ್ಟು ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಜತೆಗೆ ರೈಲು, ವಿಮಾನ ನಿಲ್ದಾಣಗಳನ್ನು ದಾಖಲೆ ರೀತಿಯಲ್ಲಿ ಸುಧಾರಣೆ ಮಾಡಲಾಗಿದೆ ಎಂದರು.
    ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಪ್ರಲ್ಹಾದ ಜೋಶಿ ಅತ್ಯಂತ ಕ್ರಿಯಾಶೀಲ ಮತ್ತು ಸಚ್ಚಾರಿತ್ರ್ಯ ಹೊಂದಿರುವ ವ್ಯಕ್ತಿತ್ವದವರು. ಜೋಶಿ ಅವರನ್ನು ಈ ಬಾರಿಯೂ ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
    ಮಾಜಿ ಮೇಯರ ಮಂಜುಳಾ ಅಕ್ಕೂರ, ಪಾಲಿಕೆ ಸದಸ್ಯೆ ಲಕ್ಷಿ$್ಮ ಹಿಂಡಸಗೇರಿ, ಮುಖಂಡರಾದ ದುರ್ಗಪ್ಪ ಜೋಗಣ್ಣವರ, ಬಸವನಗೌಡ ಪಾಟೀಲ, ಫಕ್ಕೀರಪ್ಪ ವಾಲೀಕಾರ, ಮಾರುತಿ ಹಿಂಡಸಗೇರಿ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts