More

    ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

    ಬೆಳ್ತಂಗಡಿ: ಫೆ.22ರಂದು ಕಾಣೆಯಾಗಿದ್ದ ನೆರಿಯ ನಿವಾಸಿ ತೇಜಸ್ವಿನಿ (23) ಎಂಬುವರ ಮೃತದೇಹ ಬುಧವಾರ ಕೋಲೋಡಿ ಕಾಡಿನಲ್ಲಿ ಪತ್ತೆಯಾಗಿದೆ.

    ನೆರಿಯ ಗ್ರಾಮದ ನಿವಾಸಿ ಮಂಜುನಾಥ – ಸುಶೀಲಾ ಕೆ. ದಂಪತಿ ಪುತ್ರಿ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆ ಪರಿಸರ ನಿವಾಸಿಯೊಬ್ಬರ ಮನೆಯಲ್ಲಿ ವಾಸ್ತವ್ಯವಿದ್ದು ಮನೆಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಪಡೆಯುತ್ತಿದ್ದರು. ಫೆ.22ರಂದು ಸಂಜೆ ಕಂಪ್ಯೂಟರ್ ಕ್ಲಾಸ್ ಮುಗಿಸಿ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದರು.

    ಆ ದಿನ ಸಂಜೆ 4 ಗಂಟೆ ಸುಮಾರಿಗೆ ತೇಜಸ್ವಿನಿ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗುತ್ತಿರುವ ವೇಳೆ ಅಕ್ಕ ಸುಮಂಗಳಾರಿಗೆ ಸಿಕ್ಕಿದ್ದು, ಆಕೆ ಜೀಪಿನಲ್ಲಿ ತಂಗಿಯನ್ನು ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಬಳಿಕ ಪತಿಯೊಂದಿಗೆ ತಮ್ಮ ಮನೆಗೆ ಹಿಂದಿರುಗಿದ್ದರು.

    ಯುವತಿಯ ಮೊಬೈಲ್ ಸ್ವಿಚ್ಡ್‌ಆಫ್ ಆಗಿದ್ದು, ಅತ್ತ ತಾಯಿ ಮನೆಗೂ ಹೋಗದೆ ಇತ್ತ, ಕೆಲಸದ ಮನೆಗೂ ಹೋಗದೆ ನಾಪತ್ತೆಯಾಗಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಲಾಗಿತ್ತು. ಬುಧವಾರ ಸ್ಥಳೀಯರು ಕೋಲೋಡಿ ಕಾಡಿಗೆ ಹೋಗಿದ್ದಾಗ ಯುವತಿಯ ಮೃತದೇಹ ಪತ್ತೆಯಾಗಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts