More

    ಫಲಾನುಭವಿಗಳ ಸಮಾವೇಶ ಯಶಸ್ವಿ

    ಮಳವಳ್ಳಿ: ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಫಲಾನುಭವಿಗಳ ಸಮಾವೇಶ ಯಶಸ್ವಿಯಾಗಿದ್ದು, ಇದಕ್ಕೆ ಕಾರಣೀಭೂತರಾದವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

    ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಪಡೆದುಕೊಳ್ಳುವ ಉದ್ದೇಶದಿಂದ ಕ್ಷೇತ್ರದಲ್ಲಿ ಸಿಎಂ ಕಾರ್ಯಕ್ರಮ ಆಯೋಜಿಸಲಾಗಿತ್ತೆ ಹೊರತು ಯಾವುದೇ ರಾಜಕೀಯ ಪ್ರಚಾರಕ್ಕಾಗಿ ಅಲ್ಲ. ಕೆಲವರು ಸರ್ಕಾರದ ತೆರಿಗೆ ಹಣವನ್ನು ಸಮಾರಂಭದಿಂದ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ 1.76 ಲಕ್ಷ ಕೋಟಿ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದ ಕೇಂದ್ರ ಸರ್ಕಾರವನ್ನು ಏಕೆ ಪ್ರಶ್ನಿಸುವುದಿಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

    ಸಣ್ಣ-ಪುಟ್ಟ ತಪ್ಪು ಹೊರತುಪಡಿಸಿ ಕಾರ್ಯಕ್ರಮ ಯಶಸ್ವಿಯಾಗಿದೆ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ ಅಪಮಾನ ಮಾಡಲಾಗಿದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

    ಮಳವಳ್ಳಿಯಲ್ಲಿ ಕುಡಿಯುವ ನೀರಿನ ಯೋಜನೆಯಲ್ಲಿ ದೊಡ್ಡಮಟ್ಟದ ಲೋಪವಾಗಿದ್ದು ಅದನ್ನು ಸರಿಪಡಿಸುವ ಕೆಲಸವಾಗುತ್ತಿದೆ. ಟೀಕಾಕಾರರಿಗೆ ಪ್ರತಿಕ್ರಿಯಿಸುವ ಬದಲಿಗೆ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ಕೊಡಲಾಗುವುದು. ಅಲ್ಲದೆ ಪಟ್ಟಣದಲ್ಲಿ ಪ್ರಾರಂಭವಾಗುತ್ತಿರುವ ಸಿಡಿ ಹಬ್ಬಕ್ಕೆ ತಾಲೂಕು ಆಡಳಿತದಿಂದ ಸಹಕಾರ ನೀಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts