ಕೊಲ್ಕತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆ ಗೆದ್ದು, ಇತ್ತೀಚೆಗೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸೇರಿದ ಶಾಸಕ ಬಿಸ್ವಜಿತ್ ದಾಸ್ ಅವರನ್ನು ಅನರ್ಹಗೊಳಿಸಬೇಕೆಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆಗ್ರಹಿಸಿದ್ದಾರೆ. ಈ ಬಗ್ಗೆ ಅರ್ಜಿ ಸಲ್ಲಿಸಿ ರಾಜ್ಯದ ವಿಧಾನಸಭಾ ಸಭಾಧ್ಯಕ್ಷರಿಗೆ ಅಧಿಕಾರಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಸ್ವಜಿತ್ ದಾಸ್ ಅವರು ಬಂಗಾಳದ ಬಾಗ್ಡಾ ಮೀಸಲು ಕ್ಷೇತ್ರದಿಂದ ಬಿಜೆಪಿಯ ಪರವಾಗಿ ಸ್ಪರ್ಧಿಸಿ, ಟಿಎಂಸಿಯ ಪಾರಿತೋಶ್ ಕುಮಾರ್ ಸಹ ವಿರುದ್ಧ 9,792 ಮತಗಳೊಂದಿಗೆ ಗೆಲುವು ಸಾಧಿಸಿದ್ದರು. ರಾಜ್ಯದ ಚುನಾವಣೆಯಲ್ಲಿ ಟಿಎಂಸಿ ಭಾರೀ ಬಹುಮತ ಪಡೆದು ಅಧಿಕಾರ ವಹಿಸಿಕೊಂಡ ನಂತರ, ದಾಸ್ ಅವರು ಬಿಜೆಪಿ ತ್ಯಜಿಸಿ ಟಿಎಂಸಿ ಸೇರ್ಪಡೆಯಾಗಿದ್ದರು. (ಏಜೆನ್ಸೀಸ್)
ಪೆಗಾಸಸ್ ಪ್ರಕರಣ: ಕೋರ್ಟ್ ಮುಂದೆ ಹೇಳಿಕೆ ಸಲ್ಲಿವುದಿಲ್ಲ ಎಂದ ಸರ್ಕಾರ!
ಗುಜರಾತ್ನ 17ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ