ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಾಲು ಸಾಲು ಸಮಾವೇಶಗಳು ಹಾಗೂ ಸಭೆಗಳು ನಡೆಯುತ್ತಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳು ಭರ್ಜರಿ ಕಸರತ್ತು ನಡೆಸುತ್ತಿವೆ. ಇದರ ನಡುವೆ ಆಡಳಿತಾರೂಢ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಖಡಕ್ ಎಚ್ಚರಿಕೆಯನ್ನು ನೀಡಿದೆ.
ವಿಧಾನಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಾಗಲೇ ತನ್ನ ಸಮೀಕ್ಷಾ ವರದಿಯನ್ನು ಆಧರಿಸಿ ಆರ್ಎಸ್ಎಸ್ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದೆ. ಸರ್ಕಾರ ಹಾಗೂ ಶಾಸಕರು ಇಬ್ಬರಿಗೂ ಪ್ರಬಲ ಆಢಳಿತ ವಿರೋಧಿ ಅಲೆ ಇದೆ ಎಂದು ಆರ್ಎಸ್ಎಸ್ ಹೇಳಿದೆ.
ರಾಜ್ಯದಲ್ಲಿ 40 ಪರ್ಸೆಂಟ್ ಶಾಸಕರಿಗೆ ಆಡಳಿತ ವಿರೋಧಿ ಅಲೆ ಇದೆ. ಬಿಜೆಪಿ ಶಾಸಕರು ಜನರಿಂದ ದೂರವಾಗಿದ್ದಾರೆ ಎಂಬ ಭಾವನೆ ಇದೆ. ಆಡಳಿತ ವಿರೋಧಿ ಅಲೆಯಿಂದ ಪಾರಾಗಲು ತಕ್ಷಣವೇ ಎಚ್ಚೆತ್ತುಕೊಳ್ಳಬೇಕು. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಆರ್ಎಸ್ಎಸ್ ಎಚ್ಚರಿಸಿದೆ.
ಸರ್ಕಾರದ ಸಾಧನೆ ಬಿಂಬಿಸುವುದರಲ್ಲಿ ಬಿಜೆಪಿ ವಿಫಲವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳು ಜನರನ್ನು ತಲುಪಿಲ್ಲ. ಮೋದಿ ಜನಪ್ರಿಯತೆಯನ್ನು ಬಳಸಿಕೊಳ್ಳಲಾಗದ ಸ್ಥಿತಿಯಲ್ಲಿ ರಾಜ್ಯ ಬಿಜೆಪಿ ಇದೆ. ತಕ್ಷಣವೇ ಪಕ್ಷ ಮತ್ತು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಆರ್ಎಸ್ಎಸ್ ಸಲಹೆ ನೀಡಿದೆ ಎಂದು ದಿಗ್ವಿಜಯ ನ್ಯೂಸ್ಗೆ ಬಿಜೆಪಿಯ ಉನ್ನತ ಮೂಲಗಳಿಂದ ಮಾಹಿತಿ ಬಂದಿದೆ. (ದಿಗ್ವಿಜಯ ನ್ಯೂಸ್)
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸರ್ಕಾರದಿಂದಲೇ ಪ್ರತ್ಯೇಕ ಆ್ಯಪ್ ಅಭಿವೃದ್ಧಿ: ಸಿಎಂ ಬೊಮ್ಮಾಯಿ ಮಾಹಿತಿ
ಗ್ರಾಹಕರಿಗೆ ಹೊಸ ಆಫರ್ ನೀಡಿದ ಬೆಸ್ಕಾಂ; ವಿದ್ಯುತ್ ಬಿಲ್ ಮೇಲೆ 0.25%ರಷ್ಟು ರಿಯಾಯಿತಿ
ರೈಲಿನಲ್ಲಿ ಪ್ರಯಾಣಿಸುವಾಗ ಇಲಿ ಕಡಿತ: ಸಂತ್ರಸ್ತೆಗೆ 20 ಸಾವಿರ ರೂ. ಪರಿಹಾರ ನೀಡಲು ಆದೇಶ