More

    ವಿಪಕ್ಷಗಳ ಸಭೆ ವೇಳೆ ಭೇಟಿ ನೀಡಿದ ಸ್ಪೀಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಮುಂದಾದ ಬಿಜೆಪಿ, ಜೆಡಿಎಸ್​

    ಬೆಂಗಳೂರು: ನಿನ್ನೆ ನಗರದ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಪ್ರತಿಪಕ್ಷಗಳು ಸಭೆ ನಡೆಸಿದ ವೇಳೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್​ ಭೇಟಿ ನೀಡಿದ್ದನ್ನು ವಿರೋಧಿಸಿ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ಬಿಜೆಪಿ ಮತ್ತು ಜೆಡಿಎಸ್​ ನಿರ್ಧರಿಸಿವೆ.

    ಸ್ಪೀಕರ್​ ಸ್ಥಾನ ಸಾಂವಿಧಾನಿಕ ಸ್ಥಾನವಾಗಿದ್ದು, ಯಾವುದೇ ಒಂದು ಪಕ್ಷದಲ್ಲಿ ಅವರು ಗುರುತಿಸಿಕೊಳ್ಳುವಂತಿಲ್ಲ. ಆದರೆ, ವಿಪಕ್ಷಗಳ ಸಭೆಯಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಅವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಆಕ್ರೋಶ ಹೊರಹಾಕಿದ್ದು, ಸ್ಪೀಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಮುಂದಾಗಿವೆ.

    ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಹಿ ಹಾಕಿ ವಿಧಾನಸಭೆ ಕಾರ್ಯದರ್ಶಿಗೆ ಅವಿಶ್ವಾಸ ಗೊತ್ತುವಳಿ ನೋಟಿಸ್​ ನೀಡಿವೆ.

    ಇದನ್ನೂ ಓದಿ: ಸೋಲಿನ ಹತಾಶೆಯಿಂದ ಬಿಜೆಪಿ ಮಿತ್ರ ಪಕ್ಷಗಳು ವಿದಾಯ ಕೂಟ ಆಯೋಜಿಸುತ್ತಿದೆ – ಅಖಿಲೇಶ್ ಯಾದವ್ ವ್ಯಂಗ್ಯ

    ಊಟಕ್ಕೂ ಬಿಡದೆ ಕಲಾಪ ಮುಂದುವರಿಸಿ ಬಜೆಟ್ ಮೇಲೆ ಚರ್ಚೆಗೆ ಅವಕಾಶ ನೀಡಿದ್ದಕ್ಕೆ ಬಿಜೆಪಿ ಸದಸ್ಯರು ಸ್ಪೀಕರ್​ ವಿರುದ್ಧ ಪ್ರತಿಭಟನೆ ನಡೆಸಿದರು. ಸ್ಪೀಕರ್ ಪೀಠದ ಬಳಿ ಜಮಾಯಿಸಿದ ವಿಪಕ್ಷ ನಾಯಕರು ಹರಿದ ವಿಧೇಯಕಗಳ ಪ್ರತಿಗಳನ್ನು ಎಸೆದರು. ಈ ವೇಳೆ ಸ್ಪೀಕರ್ ಪೀಠದಲ್ಲಿ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಕುಳಿತಿದ್ದರು. ಲಮಾಣಿ ಅವರ ಮುಖದ ಮೇಲೆಯೇ ಬಿಜೆಪಿ ಸದಸ್ಯರು ಹರಿದ ಹಾಳೆಗಳನ್ನು ಎಸೆದರು. ಈ ವೇಳೆ ಮಾರ್ಷಲ್​ಗಳು ಸ್ಪೀಕರ್ ರಕ್ಷಣೆಗೆ ಬಂದು ನಿಂತರು. ಬಳಿಕ ಸದನವನ್ನು ಮಧ್ಯಾಹ್ನ 3ಕ್ಕೆ ಮುಂದೂಡಲಾಯಿತು. ಬಿಜೆಪಿ ಸದಸ್ಯರ ಕಿರಿಕಿರಿ ತಡೆಯದೇ ಸದನ ಮುಂದೂಡಲಾಯಿತು.

    ಸ್ಪೀಕರ್ ಮೇಲೆ‌‌ ಪೇಪರ್ ಎಸೆದ ಹಿನ್ನಲೆ ನಾಲ್ವರು ಬಿಜೆಪಿ ಸದಸ್ಯರು ಸಸ್ಪೆಂಡ್ ಆಗುವ ಸಾಧ್ಯತೆ ಇದೆ. (ದಿಗ್ವಿಜಯ ನ್ಯೂಸ್​)

    ವಿರೋಧ ಪಕ್ಷಗಳಿಂದ I.N.D.I.A. ಹೆಸರಿನ ಬಳಕೆ: ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಿಜೆಪಿ ನಾಯಕ

    “ನನಗೆ ಅದರ ಮೇಲೆ ಯಾವುದೇ ನಿಯಂತ್ರಣವಿಲ್ಲ”: ತನ್ನ ಭಯದ ಬಗ್ಗೆ ಬಹಿರಂಗವಾಗಿ ಮಾತನಾಡಿದ ನಟಿ ಹುಮಾ ಖುರೇಷಿ

    ಟಿಕೆಟ್ ದರ ಏರಿಕೆ ಕುರಿತು ಸ್ಪಷ್ಟನೆ ನೀಡಿದ ‘ಬ್ರೋ’ ಚಿತ್ರದ ನಿರ್ಮಾಪಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts