ಬೆಂಗಳೂರು: ಬಿಎಂಟಿಸಿ ಬಸ್ನಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರನೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಭಾರತೀಯ ಸಿಟಿ ಕ್ರಾಸ್ ಬಳಿ ನಡೆದಿದೆ.
ಸವಾರ ಅಯೂಬ್ (35) ಮೃತ ಬೈಕ್ ಸವಾರ. ನಿನ್ನೆ (ಜ.27) ಸಂಜೆ ರಾತ್ರಿ 9ರ ಸುಮಾರಿಗೆ ಘಟನೆ ನಡೆದಿದೆ. ನಾಗವಾರ ಹಾಗೂ ಯಲಹಂಕ ಮಾರ್ಗವಾಗಿ ಸಂಚರಿಸುತ್ತಿದ್ದ 290 ED ಬಸ್ನಿಂದ ಸರಣಿ ಅಪಘಾತ ನಡೆದಿದೆ.
ಬೆಳ್ಳಳ್ಳಿ ಕಡೆಯಿಂದ ಹೆಗಡೆನಗರ ಮಾರ್ಗವಾಗಿ ಬಸ್ ಚಲಿಸುತ್ತಿತ್ತು. ಈ ವೇಳೆ ಭಾರತೀಯ ಸಿಟಿ ಜಂಕ್ಷನ್ ಬಳಿ ಟ್ರಾಫಿಕ್ ವಾರ್ಡನ್ ಸೂಚನೆ ಮೇರೆಗೆ ಬೈಕ್ಗಳು ನಿಂತಿದ್ದವು. ಹಿಂದೆಯಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ಗಳನ್ನು ಎದುರುಗಡೆ ಇದ್ದ ರಸ್ತೆಗೆ ತಳ್ಳಿಕೊಂಡು ಹೋಯಿತು.
ಬಿಎಂಟಿಸಿ ಬಸ್ ಡಿಕ್ಕಿಯ ರಭಸಕ್ಕೆ ಎರಡು ಕಾರು, ಮೂರು ಬೈಕ್ಗಳು ಜಖಂಗೊಂಡಿವೆ. ಘಟನಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅಯೂಬ್ ಎಂಬಾತ ಮೃತಪಟ್ಟಿದ್ದಾನೆ.
ಉಳಿದ ರಫಿಯುಲ್ಲಾ ಖಾನ್, ಮುಸಾದ್ಧೀಕ್, ಮುನ್ನಾವರ್ಗೆ ಗಂಭೀರ ಗಾಯವಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕ ಹಾಗೂ ಬಸ್ ಅನ್ನು ವಶಕ್ಕೆ ಪಡೆದು ಸಂಚಾರಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಬ್ರೇಕ್ ವೈಫಲ್ಯದಿಂದ ಸಂಭವಿಸಿದ್ದಾಗಿ ಚಾಲಕ ಗೋವಿಂದರಾಜು ಹೇಳಿಕೆ ನೀಡಿದ್ದಾನೆ. (ದಿಗ್ವಿಜಯ ನ್ಯೂಸ್)
ಜೂ.ಎನ್ಟಿಆರ್ ಸೋದರಸಂಬಂಧಿ ನಂದಮೂರಿ ತಾರಕ ರತ್ನಗೆ ಹೃದಯಾಘಾತ: ಬೆಂಗಳೂರು ಆಸ್ಪತ್ರೆಗೆ ಶಿಫ್ಟ್
ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಸಹೋದರ ಆಸ್ಪತ್ರೆಯಲ್ಲಿ ನಿಧನ: ನಿರ್ಲಕ್ಷ್ಯ ಆರೋಪ, ಇಬ್ಬರು ವೈದ್ಯರು ಸಸ್ಪೆಂಡ್
ಷೇರುಪೇಟೆಯಲ್ಲಿ ಕರಡಿ ಕುಣಿತ, ಅದಾನಿ ಸಮೂಹಕ್ಕೆ ಹೊಡೆತ; ಒಂದೇ ದಿನ 2.5 ಲಕ್ಷ ಕೋಟಿ ರೂ. ನಷ್ಟ