ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎಎಸ್ಐ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಶನಿವಾರ (ಫೆ.27) ನಡೆದಿದೆ.
ರಂಗಸ್ವಾಮಯ್ಯ (59) ಸಾವನ್ನಪ್ಪಿದ ಎಎಸ್ಐ. ಇವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಸಂಜೆ 4 ಗಂಟೆ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತವಾಗಿದೆ.
ತಕ್ಷಣ ರಂಗಸ್ವಾಮಯ್ಯ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೆರಳುವಾಗ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ. ರಂಗಸ್ವಾಮಯ್ಯರ ಸಾವಿಗೆ ಅವರ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಪತ್ನಿ ಮುಖ ನೋಡಿ ಮುಜುಗರಕ್ಕೊಳಗಾಗಿ ಆರೋಪಿ ಆತ್ಮಹತ್ಯೆ ಪ್ರಕರಣ: ಪಿಎಸ್ಐ ಸಸ್ಪೆಂಡ್!
ತಂದೆಯ ಎಡವಟ್ಟಿಗೆ ಮಗ ಬಲಿ: ಸೆವೆನ್ ಅಪ್ ಎಂದು ತಿಳಿದು ವಿಷ ಕುಡಿದ ಯುವಕ ದುರಂತ ಸಾವು!
ಲೈಂಗಿಕ ಶಕ್ತಿ ವೃದ್ಧಿಗೆ ಆಂಧ್ರದಲ್ಲಿ ಕತ್ತೆಗಳ ಮಾರಣಹೋಮ: ಅಳಿವಿನಂಚಿಗೆ ಸಾಗುತ್ತಿರುವ ಮೂಕ ಪ್ರಾಣಿ!