ಬೆಂಗಳೂರು: ರಾಮೇಶ್ವರ ಕೆಫೆ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರನ್ನು ಬಂಧನ ಮಾಡಿದೆ.
ಬಂಧಿತರನ್ನು ಅಬ್ದುಲ್ ಮತೀನ್ ಮತ್ತು ಮುಸ್ಸಾವೀರ್ ಹುಸೇನ್ ಎಂದು ಗುರುತಿಸಲಾಗಿದೆ. ಈ ಪ್ರಕರಣದ ಪ್ರಮುಖ ಸಂಚುಕೋರರು ಎಂದು ಹೇಳಲಾಗಿದೆ. ಆದರೂ ಈ ಬಗ್ಗೆ ಎನ್ಐಎ ಯಾವುದೇ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.
ಮಾರ್ಚ್ 1ರಂದು ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ಶಂಕಿತ ಬಾಂಬರ್ ರವೆ ಇಡ್ಲಿ ತಿಂದು, ಬಾಂಬ್ ಇಟ್ಟು ಪರಾರಿಯಾಗಿದ್ದ. ಸ್ಫೋಟದಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದರು.
ಈ ಪ್ರಕರಣದ ಶಂಕಿತ ಬಗ್ಗೆ ಮಾಹಿತಿ ನೀಡಿದರೆ 10 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಎನ್ಐಎ ಅಧಿಕಾರಿಗಳು ಘೋಷಣೆ ಮಾಡಿದ್ದಾರೆ. ಶಂಕಿತ ವ್ಯಕ್ತಿ ಕರ್ನಾಟಕದ ವಿವಿಧ ಬಸ್ಗಳಲ್ಲಿ ಪ್ರಯಾಣಿಸುವ ಹಲವಾರು ದೃಶ್ಯಗಳನ್ನು ಎನ್ಐಎ ಬಿಡುಗಡೆ ಮಾಡಿತ್ತು.
ಇಲ್ಲಿಯವರೆಗೆ ನಾಲ್ವರ ಬಂಧನ
ರಾಮೇಶ್ವರ ಕೆಫೆ ಸ್ಫೋಟ ಪ್ರಕರಣದಲ್ಲಿ ಇಲ್ಲಿಯವರೆಗೆ ನಾಲ್ವರನ್ನು ಎನ್ಐಎ ಬಂಧಿಸಿದೆ. ಈ ಹಿಂದೆ ಮಾಜ್ ಮುನೀರ್ ಮತ್ತು ಮುಜಾಮಿಲ್ ಶರೀಫ್ ಎಂಬುವರನ್ನು ಎನ್ಐಎ ಬಂಧಿಸಿತ್ತು. ಶಂಕಿತ ಶರೀಫ್, ಬಾಂಬರ್ಗೆ ಲಾಜಿಸ್ಟಿಕ್ ಬೆಂಬಲ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ. ಶರೀಫ್ ಹೇಳಿಕೆಯನ್ನು ಆಧರಿಸಿ ಮಾಜ್ ಮುನೀರ್ನನ್ನು ಬಂಧಿಸಲಾಗಿದೆ. ಈತ ಶಿವಮೊಗ್ಗ ಸ್ಫೋಟ ಮತ್ತು ಮಂಗಳೂರು ಗಲಭೆ ಪ್ರಕರಣದ ಶಂಕಿತನಾಗಿದ್ದಾನೆ.
ಲೋಕಸಮರ 2024: ಎಲ್ಲಿ ಹೋದರು ಮಾಯಾವತಿ? ಚುನಾವಣಾ ಕಣದಿಂದ ಮಿಸ್ಸಿಂಗ್!
ಡಿಕೆ ಆರ್ಭಟ ಕಂಡು ಕೀಟಲೆ ಮಾಡಿದ ರೋಹಿತ್! ಸ್ಟಂಪ್ ಮೈಕ್ನಲ್ಲಿ ಸೆರೆಯಾದ ಮಾತುಗಳು ವೈರಲ್