ಬೆಂಗಳೂರು: ಮಹಿಳೆಯೊಬ್ಬರ ಮೇಲೆ ನಟ ದರ್ಶನ್ ಅವರ ಮನೆಯ ನಾಯಿ ಮೇಲೆ ದಾಳಿ ಮಾಡಿತ್ತು. ಈ ಕುರಿತಾಗಿ ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆಯ ಕುರಿತಾಗಿ ನಟ ದರ್ಶನ್ ಪೊಲೀಸ್ ಠಾಣೆಗೆ ಬಂದಿದ್ದಾರೆ.
ನಡೆದಿದ್ದೇನು?: ಕೆಲ ದಿನಗಳ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ನಾಯಿ ಅಮಿತಾ ಜಿಂದಾಲ್ ಎಂಬ ಮಹಿಳೆ ಮೇಲೆ ದಾಳಿ ಮಾಡಿತ್ತು.ನಟ ದರ್ಶನ್ ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್ 289ರ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದರ್ಶನ್ಗೆ ಪೊಲೀಸರು ನೋಟಿಸ್ ನೀಡಿದ್ದರು.
ಈ ಪ್ರಕರಣದಲ್ಲಿ ಎ2 ಆಗಿರುವ ಅವರು ಇಂದು (ನವೆಂಬರ್ 15) ಪೊಲೀಸ್ ಠಾಣೆಗೆ ಬಂದು ವಿಚಾರಣೆಯಲ್ಲಿ ಭಾಗಿ ಆಗಿದ್ದಾರೆ. ದರ್ಶನ್ ಅವರು ಆರ್ಆರ್ ನಗರ ಪೊಲೀಸ್ ಠಾಣೆಗೆ ಬಂದಿದ್ದಾರೆ. ಹದಿನೈದು ನಿಮಿಷದಲ್ಲಿ ವಿಚಾರಣೆ ಮುಗಿಸಿ ಹೊರಟಿದ್ದಾರೆ. ಹೇಳಿಕೆ ಪ್ರತಿಗೆ ಸಹಿ ಹಾಕಿಸಿಕೊಂಡ ಇನ್ಸ್ಪೆಕ್ಟರ್ ವಿಚಾರಣೆ ಮುಗಿಸಿದ್ರು. ಬಳಿಕ ಜೀಪ್ನಲ್ಲಿ ದರ್ಶನ್ ತೆರಳಿದ್ದಾರೆ.
ಮೂಲಗಳ ಪ್ರಕಾರ, ವಿಚಾರಣೆ ಬಳಿಕ ಮಾಧ್ಯಮದ ಮುಂದೆ ಮಾತಾಡಿದ ನಟ ದರ್ಶನ್, ನಮ್ಮ ಹುಡುಗರಿಂದ ತಪ್ಪಾಗಿದೆ. ನಾನು ಮೊದಲೇ ಅವರಿಗೆ ಹೇಳಿದ್ದೇನೆ. ಮನೆ ಬಳಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಅಂತ. ಆದ್ರೆ ಘಟನೆ ನಡೆದ ದಿನ ನಾನು ಗುಜರಾತ್ ನಲ್ಲಿ ಶೂಟಿಂಗ್ ನಲ್ಲಿದ್ದೆ. ಈ ರೀತಿ ಆಗದಂತೆ ಎಚ್ಚರಿಕೆ ನೀಡಿದ್ದೇನೆ. ಇನ್ನು ನಮ್ಮಿಂದ ಈ ರೀತಿ ಆಗಲ್ಲ. ನಮ್ಮ ಸಿಬ್ಬಂದಿಗೂ ಹೇಳಿದ್ದೇನೆ ಎಂದು ಇನ್ಸ್ ಪೆಕ್ಟರ್ ಮುಂದೆ ನಟ ದರ್ಶನ್ ಹೇಳಿದ್ದಾರಂತೆ ಎನ್ನಲಾಗಿದೆ.
ಈ ಹಿಂದೆ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರ ಹೊಣೆಯನ್ನು ಯಾರೆಲ್ಲಾ ಹೊತ್ತೊಂಡಿದ್ದಾರೆ?