ಮೈಸೂರು: ಬೆಂಗಳೂರು-ಮೈಸೂರು ನಡುವೆ ನಿರ್ಮಾಣವಾಗುತ್ತಿರುವ ಎಕ್ಸ್ ಪ್ರೆಸ್ ರಸ್ತೆಯಲ್ಲಿ ಬೈಕ್ಗಳ ಸಂಚಾರ ಕುರಿತು ಸಂಸದ ಪ್ರತಾಪ್ ಸಿಂಹ ಈ ರೀತಿ ಹೇಳಿಕೆ ನೀಡಿದ್ದಾರೆ.
ಪ್ರಸ್ತುತ ದಶಪಥ ರಸ್ತೆ ಇದಾಗಿದ್ದು, ಕಾಮಗಾರಿ ನಡೆಯುತ್ತಿದೆ. ಇದು ಪೂರ್ಣಗೊಂಡ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಕೇವಲ ಒಂದು ಗಂಟೆಯೊಳಗೆ ತಲಪಬಹುದು ಎನ್ನಲಾಗಿದೆ. ಈ ನಡುವೆ ಎಕ್ಸ್ಪ್ರೆಸ್ವೇ ಆಗಿರುವುದರಿಂದ ದ್ವಿಚಕ್ರ ವಾಹನಗಳಿಗೆ ಅನುಮತಿ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ನೀಡಬೇಕೆ ಅಥವಾ ಬೇಡವೇ ಎಂಬ ಚರ್ಚೆಯೂ ನಡೆಸಲಾಗಿದೆ ಎಂದು ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಸಮಯ 1 ಗಂಟೆಗೆ ಕಡಿತಗೊಳ್ಳಲಿದೆ.
ಈ ಮಧ್ಯೆ ಮೈಸೂರು ಬೆಂಗಳೂರು ಸರ್ವಿಸ್ ರಸ್ತೆಯಲ್ಲಿ ಬೈಕ್ಗಳಿವೆ ಮುಕ್ತ ಅವಕಾಶ ಕೊಡಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆಮುಖ್ಯರಸ್ತೆಯಲ್ಲಿ ಪ್ರವೇಶ ನೀಡಬೇಕಾ ಬೇಡವಾ ಈ ಬಗ್ಗೆ ಚಿಂತನೆ ನಡೆದಿದೆ ಎಂದಿದ್ದಾರೆ.
ಎಕ್ಸ್ಪ್ರೆಸ್ ರಸ್ತೆಯಲ್ಲಿ ಬೇರೆ ವಾಹನಗಳಿಗೆ ಅಡ್ಡಿಯಾಗುವುದರಿಂದ ಈ ಈ ಬಗ್ಗೆ ಸಿಸಿ ಆಧಾರದ ಮೇಲೆ ಬೈಕ್ಗಳಿಗೆ ಪ್ರವೇಶಕ್ಕೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಅವಕಾಶ ನೀಡಿದರೆ ಬೈಕ್ಗಳಿಗೂ ಟೋಲ್ ವಿಧಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದಿದ್ದಾರೆ. (ದಿಗ್ವಿಜಯ ನ್ಯೂಸ್)
ಅಬ್ಬಬ್ಬಾ.. ಶ್ರೀಲಂಕಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಎಷ್ಟು ಗೊತ್ತಾ?: ಊಹಿಸಿಕೊಳ್ಳಲು ಸಾಧ್ಯವಿಲ್ಲ!