ಬೆಂಗಳೂರು: ರಾಜ್ಯದ ಕೆಲವೆಡೆ ಇಂದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ಮಾಡಿದ್ದು, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದೆ.
ಇಂದು ಬೆಳಗ್ಗಿನ ಜಾವ ಬೆಳ್ಳಾರೆ ಮನೆಯಲ್ಲಿ ಆರೋಪಿಗಳಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆ ಎಂಬುವರನ್ನು ಅರೆಸ್ಟ್ ಮಾಡಿರುವುದಾಗಿ ಎನ್ಐಎ ಉನ್ನತ ಮೂಲಗಳ ಮಾಹಿತಿ ನೀಡಿದೆ.
ಆರೋಪಿ ಇಕ್ಬಾಲ್ ಬೆಳ್ಳಾರೆ, ಬೆಳ್ಳಾರೆ ಗ್ರಾಮದ ಪಂಚಾಯತ್ ಸದಸ್ಯ ಮತ್ತು ಶಾಫಿ ಬೆಳ್ಳಾರೆ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ. ಈ ಇಬ್ಬರು ಜೊತೆಯಲ್ಲಿ ಸುಳ್ಯದ ಇಬ್ರಾಹಿಂ ಶಾ ಎಂಬಾತನನ್ನು ಎನ್ಐಎ ಬಂಧಿಸಿದೆ.
ಹುಬ್ಬಳ್ಳಿಯಲ್ಲಿಯೂ ಎನ್ಐಎ ದಾಳಿ ನಡೆಸಿದೆ. ಹಳೇ ಹುಬ್ಬಳ್ಳಿಯ ನೂರಾನಿ ಪ್ಲಾಟ್ನಲ್ಲಿರುವ ಎಸ್ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾಬಂದ್ ಮನೆ ಮೇಲೆ ಹಾಗೂ ಕಸಬಾಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕಚೇರಿಯ ಮೇಲೂ ಎನ್ಐಎ ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದೆ. ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ 10 ಮಂದಿಯ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಮನೆಯಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿ ಅಧಿಕಾರಿಗಳು ಹಿಂದಿರುಗಿದ್ದಾರೆ.
ಮೈಸೂರಿನಲ್ಲೂ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೈಸೂರಿನ ಎನ್ಆರ್ ಮೊಹಲ್ಲಾ ಹಾಗೂ ಮಂಡಿ ಮೊಹಲ್ಲಾದಲ್ಲಿ ಎಸ್ಡಿಪಿಐನ ಕೆಲ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. (ದಿಗ್ವಿಜಯ ನ್ಯೂಸ್)
ಡ್ರೈವಿಂಗ್ ವೇಳೆ ಮೊಬೈಲ್ನಲ್ಲಿ ಚಾಟಿಂಗ್ ಮಾಡ್ತಿದ್ದ ಬಸ್ ಚಾಲಕನನ್ನು ವಶಕ್ಕೆ ಪಡೆದ ಸಾರಿಗೆ ಇಲಾಖೆ ಅಧಿಕಾರಿಗಳು!
ಗುಜರಾತ್ ಚುನಾವಣೆಗೆ 50 ಸಾವಿರ ಕೋಟಿ ರೂ. ಬೆಟ್ಟಿಂಗ್? ಬಿಜೆಪಿ ಬಹುಮತ ಪಡೆಯಲಿದೆ ಎನ್ನುತ್ತಿರುವ ಬುಕ್ಕಿಗಳು
ಟ್ವಿಟರ್ನಿಂದ ವಜಾಗೊಂಡ ಬೆನ್ನಲ್ಲೇ ಭಾರತೀಯ ಉದ್ಯೋಗಿ ಮಾಡಿರುವ ಟ್ವೀಟ್ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ!