More

    ಕ್ಷೇತ್ರದ ಮತದಾರರಿಗೆ ಆಮಿಷ: ಬಿಜೆಪಿಗೆ ಅಸ್ತ್ರವಾದ ಕಾಂಗ್ರೆಸ್​ ನಾಯಕ ರಾಮಲಿಂಗ ರೆಡ್ಡಿ ಕುಕ್ಕರ್​ ಹಂಚುವ ವಿಡಿಯೋ

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರಿಗೆ ಜನಪ್ರತಿನಿಧಿಗಳ ಆಸೆ-ಆಮಿಷದ ಭರಾಟೆ ಜೋರಾಗಿದೆ. ಇಷ್ಟು ದಿನ ಬೆಳಗಾವಿಯಲ್ಲಿ ಕೇಳುತ್ತಿದ್ದ ಕುಕ್ಕರ ಸದ್ದು ಇದೀಗ ಬೆಂಗಳೂರಿನ ಬಿಟಿಎಂ ಲೇಔಟ್​ನಲ್ಲೂ ಕೇಳುತ್ತಿದೆ.

    ಹೌದು, ಇಷ್ಟು ದಿನ ಕುಕ್ಕರ್​ ಅಂದರೆ ಸಾಕು ಬೆಳಗಾವಿಯ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ನೆನಪಾಗುತ್ತಿದ್ದರು. ಏಕೆಂದರೆ ಪ್ರತಿ ಬಾರಿ ಚುನಾವಣೆ ಬಂದಾಗ ಹೆಬ್ಬಾಳ್ಕರ್​ ಅವರು ಕುಕ್ಕರ್​ ಹಂಚುವುದು ಸಾಮಾನ್ಯ. ಇದೀಗ ಕಾಂಗ್ರೆಸ್​ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಲಿಂಗ ರೆಡ್ಡಿ ಅವರು ಹೆಬ್ಬಾಳ್ಕರ್​ ಹಾದಿಯನ್ನು ಅನುಸರಿಸಿದ್ದಾರೆ. ಕುಕ್ಕರ್​ ಹಂಚುವ ಮೂಲಕ ಬಿಟಿಎಂ ಲೇಔಟ್​ ಮತದಾರರನ್ನು ಸೆಳೆಯುವ ಯತ್ನ ಮಾಡಿದ್ದಾರೆ.

    ಒಂದು ಕಡೆ ಕಾಂಗ್ರೆಸ್​ ನಾಯಕರು ಮತದಾರರಿಗೆ ಆಮಿಷ ನೀಡಿದ್ದಾರೆ ಎಂದು ಬಿಜೆಪಿ ನಾಯಕ ರಮೇಶ್​ ಜಾರಕಿಹೊಳಿ ವಿರುದ್ಧ ಆರೋಪ ಹೊರಿಸಿ ದೂರು ನೀಡಿದ್ದಾರೆ. ಆದರೆ, ಅವರದೇ ಪಕ್ಷದ ಹಿರಿಯ ನಾಯಕ ಕುಕ್ಕರ್​ ನೀಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಕಾಂಗ್ರೆಸ್​ನ ಹಿರಿಯ ಮುಖಂಡ ರಾಮಲಿಂಗರೆಡ್ಡಿ ಅವರು ಸ್ವಕ್ಷೇತ್ರದಲ್ಲಿ ಮಹಿಳೆಯರಿಗೆ ಕುಕ್ಕರ್ ಹಂಚುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲೂ ವೈರಲ್​ ಆಗಿದ್ದು, ಇದು ಬಿಜೆಪಿಗೆ ಅಸ್ತ್ರವಾಗಿದೆ. (ದಿಗ್ವಿಜಯ ನ್ಯೂಸ್​​)

    ವಿಶ್ವದ ಮೊದಲ ಹಾಗೂ ತನ್ನದೇಯಾದ ಕರೊನಾ ಮೂಗಿನ ಲಸಿಕೆ ಬಿಡುಗಡೆ ಮಾಡಿದ ಭಾರತ: 1 ಡೋಸ್​ಗೆ 800 ರೂ.

    ಕೇಂದ್ರದಿಂದ ಯಾವುದೇ ನೋಟಿಸ್ ಬಂದಿಲ್ಲ; ಪದೇ ಪದೇ ಊಹಾಪೋಹ ಯಾಕೆ ಹರಡುತ್ತಿದೆಯೋ ಗೊತ್ತಿಲ್ಲ!

    ಸಮರ್ಥ ಅಭ್ಯರ್ಥಿಗಳಿದ್ದಾಗ ನಮ್ಮ ಕುಟುಂಬದಿಂದ ಯಾರನ್ನೂ ಸ್ಪರ್ಧೆಗೆ ಇಳಿಸುವುದಿಲ್ಲ; ಎಚ್​​ಡಿಕೆ ಸ್ಪಷ್ಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts