ಬೆಂಗಳೂರು: ಮಾವ ಮಾಡಿದ್ದ ಸಾಲಕ್ಕೆ ಆರೋಪಿಗಳು ಅಳಿಯನನ್ನೇ ಅಪಹರಣ ಮಾಡಿರುವ ಘಟನೆ ನಗರದ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ಸ್ವರೂಪ್ ಶೆಟ್ಟಿ ಮತ್ತು ತಂಡದಿಂದ ರಾಜಶೇಖರ ಎಂಬಾತನನ್ನು ಅಪಹರಿಸಲಾಗಿದೆ. ರಾಜಶೇಖರ ಅವರ ಮಾವ ಲಕ್ಷ್ಮಣ್ ರೆಡ್ಡಿ ಮತ್ತು ಸ್ವರೂಪ್ ಶೆಟ್ಟಿ ಮಧ್ಯ ಹಣಕಾಸಿನ ವ್ಯವಹಾರ ನಡೆದಿತ್ತು. ಸ್ವರೂಪ್ ಶೆಟ್ಟಿ ಬಳಿ ಲಕ್ಷ್ಮಣ್ ರೆಡ್ಡಿ 5 ಲಕ್ಷ ರೂ. ಹಣ ತೆಗೆದುಕೊಂಡಿದ್ದ. ಆದ್ರೆ 2 ಲಕ್ಷ ವಾಪಸ್ ಕೊಟ್ಟು ಉಳಿದ ಮೂರು ಲಕ್ಷ ಕೊಡದೆ ಸತಾಯಿಸುತ್ತಿದ್ದ. ಹೀಗಾಗಿ ಲಕ್ಷ್ಮಣ್ ರೆಡ್ಡಿ ಅಳಿಯ ರಾಜಶೇಖರ್ನನ್ನು ಸ್ವರೂಪ್ ಆ್ಯಂಡ್ ಗ್ಯಾಂಗ್ ಅಪಹರಿಸಿತ್ತು.
ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ಗಾರೆಬಾವಿಪಾಳ್ಯ ಬಳಿ ಅಪಹರಣ ಮಾಡಲಾಗಿದೆ. ಕಿಡ್ನಾಪ್ ಮಾಡಿ ರಾಜಶೇಖರ್ ಫೋನ್ನಿಂದಲೇ ಲಕ್ಷ್ಮಣ್ ರೆಡ್ಡಿಗೆ ಕರೆ ಮಾಡದೆ ,ಲಕ್ಷ್ಮಣ್ ಅವರ ಅಣ್ಣ ರಾಮಚಂದ್ರರಿಗೆ ಕಾಲ್ ಮಾಡಿಸಿ, ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು.
ಕರೆ ಮಾಡಿಸಿ 50 ಸಾವಿರ ಹಣ ಅಕೌಂಟ್ಗೆ ಹಾಕಿಸಿಕೊಂಡಿದ್ದ ಆರೋಪಿಗಳು, ಮತ್ತೆ 2.5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಎರಡನೇ ಬಾರಿ ಆರೋಪಿಗಳೇ ಮಾತನಾಡಿ ಹಣದ ಬೇಡಿಕೆ ಇಟ್ಟಿದ್ದರು. ನಿಮ್ಮ ಅಳಿಯನನ್ನು ಕಿಡ್ನಾಪ್ ಮಾಡಿದ್ದೇವೆ, 2.5 ಲಕ್ಷ ಹಣ ತಂದು ಕೊಡಿ ಎಂದು ಡಿಮ್ಯಾಂಡ್ ಮಾಡಿದ್ದರು. ಅಲ್ಲದೆ, ರಾಜಶೇಖರ ಮೇಲೆ ಹಲ್ಲೆ ಸಹ ಮಾಡಿದ್ದರು.
ಇದೀಗ ಸ್ವರೂಪ್ ಶೆಟ್ಟಿ ಮತ್ತು ಗ್ಯಾಂಗ್ ವಿರುದ್ಧ ದೂರು ದಾಖಲಾಗಿದೆ. ಬೊಮ್ಮನಹಳ್ಳಿ ಠಾಣೆಯಲ್ಲಿ ರಾಜಶೇಖರ್ ಮಾವ ರಾಮಚಂದ್ರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬೊಮ್ಮನಹಳ್ಳಿ ಠಾಣಾ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್)
ಅಭಿವೃದ್ಧಿ ಯೋಜನೆ ಅಜೆಂಡಾ; ದೆಹಲಿಗೆ ಸಿಎಂ ಬೊಮ್ಮಾಯಿ: ಡಬಲ್ ಇಂಜಿನ್ ಸರ್ಕಾರ ಸಾಕಾರಕ್ಕೆ ಯತ್ನ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ; ಎಂದಿನಿಂದ ಎಂದಿನವರೆಗೆ ಎಕ್ಸಾಂ?