ಬೆಂಗಳೂರು: ಸಿಲಿಕಾನ್ ಸಿಟಿಯ ಬಹುದೊಡ್ಡ ಸಮಸ್ಯೆಯೆಂದರೆ ಅದು ಟ್ರಾಫಿಕ್. ಪ್ರತಿನಿತ್ಯ ಸಾಕಷ್ಟು ಮಂದಿ ಟ್ರಾಫಿಕ್ನಿಂದಾಗಿ ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ಅದೇ ಟ್ರಾಫಿಕ್ ಮಗುವೊಂದನ್ನು ಬಲಿ ಪಡೆದುಕೊಂಡಿದೆ.
ಬೆಂಗಳೂರಿನ ನೆಲಮಂಗಲದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಟ್ರಾಫಿಕ್ ಜಾಮ್ನಿಂದಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಒಂದೂವರೆ ವರ್ಷದ ಮಗು ದುರಂತ ಸಾವಿಗೀಡಾಗಿದೆ.
ಮಗುವನ್ನು ತುರ್ತು ಚಿಕಿತ್ಸೆಗೆಂದು ಹಾಸನದಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆತರಲಾಗುತ್ತಿತ್ತು. ಹಾಸನದಿಂದ ಕೇವಲ ಒಂದು ಗಂಟೆಯಲ್ಲೇ ಜೀರೋ ಟ್ರಾಫಿಕ್ನಲ್ಲಿ ಮಗು ನೆಲಮಂಗಲ ತಲುಪಿತ್ತು. ಆದರೆ, ನೆಲಮಂಗಲದಿಂದ ಗೊರಗುಂಟೆಪಾಳ್ಯ ರಸ್ತೆಯಲ್ಲಿ ಆಂಬ್ಯುಲೆನ್ಸ್ ಟ್ರಾಫಿಕ್ನಲ್ಲಿ ಸಿಲುಕಿತು.
ಟ್ರಾಫಿಕ್ನಲ್ಲಿ ಸಿಲುಕಿ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಏನು ಅರಿಯದ ಕಂದಮ್ಮ ಪ್ರಾಣ ಬಿಟ್ಟಿದೆ. ನೆಲಮಂಗಲದಿಂದ ಗೊರಗುಂಟೆಪಾಳ್ಯಗೆ ಟ್ರಾಫಿಕ್ ಜಾಮ್ ಹಿನ್ನೆಲೆ ಸುಮಾರು 20 ನಿಮಿಷಕ್ಕೂ ಹೆಚ್ಚು ಸಮಯ ವ್ಯರ್ಥವಾಯಿತು. ಇದರ ನಡುವೆ ಸರಿಯಾದ ಚಿಕಿತ್ಸೆ ಸಿಕ್ಕಿದ್ದರೆ ಮಗು ಬದುಕುಳಿಯುವ ಸಾಧ್ಯತೆ ಇತ್ತು. ಆದರೆ, ಆಂಬ್ಯುಲೆನ್ಸ್ಗೆ ದಾರಿ ಸಿಗದೇ ಮಗು ಮೃತಪಟ್ಟಿದೆ. (ದಿಗ್ವಿಜಯ ನ್ಯೂಸ್)
ಅದಾನಿ ಗ್ರೂಪ್ಗೆ 21 ಸಾವಿರ ಕೋಟಿ ರೂ. ಸಾಲ: ಚಿಂತಿಸುವ ಅಗತ್ಯವಿಲ್ಲ ಎಂದ SBI ಚೇರ್ಮನ್
ರಾಯಲ್ ಎನ್ಫೀಲ್ಡ್ಗೆ ಕೆಟಿಎಂ ಬೈಕ್ಗೆ ಡಿಕ್ಕಿ: ಯುವತಿ ದುರಂತ ಸಾವು, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಘಟನೆ
ರಾಜ್ಯ ಸರ್ಕಾರಕ್ಕೆ ಸೇರಬೇಕಾದ 76 ಲಕ್ಷ ರೂ. ಗುಳುಂ! ಡಿ ಗ್ರೂಪ್ ನೌಕರನ ಕೈಚಳಕ, ಪತ್ನಿ, ನೆಂಟರ ಖಾತೆಗೆ ಹಣ ಜಮೆ