More

    ಪತ್ನಿ ಬಾಗಿಲು ಮುಚ್ಚಿಕೊಂಡಿದ್ದಾಳೆಂದು ಅತ್ತೆ ಮನೆಯವರಿಗೆ ಕರೆ ಮಾಡಿದ ಪತಿ: ನೋಡುವಷ್ಟರಲ್ಲಿ ನಡೆದಿತ್ತು ದುರಂತ

    ಬೆಂಗಳೂರು: ನೇಣು ಬಿಗಿದುಕೊಂಡು ಮಹಿಳಾ ಸಾಫ್ಟ್​ವೇರ್​ ಉದ್ಯೋಗಿಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ನಗರದ ಜೋಗುಪಾಳ್ಯದಲ್ಲಿ ನಡೆದಿದೆ.

    ದಿವ್ಯಾ (30) ಆತ್ಮಹತ್ಯೆಗೆ ಶರಣಾದ ಟೆಕ್ಕಿ. 2014 ರಲ್ಲಿ ಅರವಿಂದ್ ಎಂಬ ಟೆಕ್ಕಿಯನ್ನು ದಿವ್ಯಾ ವಿವಾಹವಾಗಿದ್ದಳು. ಮದುವೆಯ ನಂತರ ಹಲವು ವರ್ಷಗಳಿಂದ ಗಂಡನ ಮನೆಯವರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಇದನ್ನೂ ಓದಿ: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ; ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆ, ವಸ್ತುಗಳು ಬೆಂಕಿಗಾಹುತಿ

    ದಿವ್ಯಾ ಬಾಗಿಲು ಲಾಕ್ ಮಾಡಿಕೊಂಡಿದ್ದಾಳೆಂದು ಅತ್ತೆ ಮನೆಯವರಿಗೆ ಪತಿ ಅರವಿಂದ್​ ಕರೆ ಮಾಡಿದ್ದ. ಬಳಿಕ ದಿವ್ಯಾ ಕುಟುಂಬಸ್ಥರು ಬಂದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.

    ಆತ್ಮಹತ್ಯೆಗೆ ಪತಿ ಹಾಗೂ ಆತನ ಕುಟುಂಬಸ್ಥರು ಕಾರಣ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ದಿವ್ಯಾ ಪೊಷಕರು ಆರೋಪ ಮಾಡಿದ್ದಾರೆ. ಅಲ್ಲದೆ, ದೂರು ಸಹ ದಾಖಲಾಗಿದ್ದು, ಇದರ ಬೆನ್ನಲ್ಲೇ ಹಲಸೂರು ಪೊಲೀಸರು ಆರೋಪಿ ಅರವಿಂದ್​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ. (ದಿಗ್ವಿಜಯ ನ್ಯೂಸ್​)

    ಜಾಲತಾಣದಲ್ಲಿ ಅವಹೇಳನಕಾರಿ ಬರಹ: IAS​ ಅಧಿಕಾರಿ ಆಕಾಶ್​ ಶಂಕರ್ ವಿರುದ್ಧ ಪತ್ನಿಯಿಂದಲೇ ದೂರು​

    ಆಸ್ಟ್ರೇಲಿಯಾ ಕಡಲ ತೀರದಲ್ಲಿ ನಿಗೂಢ ವಸ್ತು ಪತ್ತೆ: ಹತ್ತಿರ ಹೋಗದಂತೆ ಪೊಲೀಸ್​ ಇಲಾಖೆಯಿಂದ ಎಚ್ಚರಿಕೆ

    ಹೆಂಡತಿ ಸೋತಿದ್ದಕ್ಕೆ, ಅಪ್ಪನ ಪ್ರಾಣವನ್ನೇ ತೆಗೆದ ಮಗ..!?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts