ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬೆಟ್ಟಸ್ವಾಮಿಗೆ ಲಘು ಹೃದಯಾಘಾತವಾಗಿದೆ.
ಬಿಜೆಪಿ ನಿನ್ನೆ ರಾತ್ರಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ದಿಲೀಪ್ ಕುಮಾರ್ ಗೆ ಟಿಕೆಟ್ ಘೋಷಣೆಯಾಗಿದ್ದನ್ನು ಕೇಳಿ ಎದೆನೋವು ಕಾಣಿಸಿಕೊಂಡಿದೆ. ಬೆಟ್ಟಸ್ವಾಮಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು.
ಇದನ್ನೂ ಓದಿ: ಕ್ರಿಕೆಟ್ ಟೀಮ್ನಲ್ಲಿ ತಮಿಳರಿಲ್ಲ..ಸಿಎಸ್ಕೆ ಬ್ಯಾನ್ ಮಾಡಿ ಎಂದ ಶಾಸಕ!
ರಾತ್ರಿ ಸರಿಸುಮಾರು 11.30ರ ಸಮಯದಲ್ಲಿ ಬೆಟ್ಟಸ್ವಾಮಿಗೆ ಲಘು ಹೃದಯಾಘಾತವಾಗಿದ್ದು, ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗ್ಗೆ ಆಸ್ಪತ್ರೆಯಿಂದ ಬೆಟ್ಟಸ್ವಾಮಿ ಡಿಸ್ಚಾರ್ಜ್ ಆಗಿದ್ದಾರೆ.