ಬೆಂಗಳೂರು: ಕಾಂಗ್ರೆಸ್ ಶಾಸಕರೊಬ್ಬರು ಶರ್ಟ್ ಬಿಚ್ಚಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಘಟನೆ ವಿಧಾನಸಭೆ ಅಧಿವೇಶನಲ್ಲಿ ಇಂದು ಸಂಭವಿಸಿದೆ.
ಒನ್ ನೇಷನ್ ಒನ್ ಎಲೆಕ್ಷನ್ ಕುರಿತು ಚರ್ಚೆಗೆ ವಿರೋಧಿಸಿದ ವಿಪಕ್ಷದವರು ಸ್ಪೀಕರ್ ಮೇಲೆ ಪೇಪರ್ ಎಸೆದು ಗರಂ ಆದರು. ಅದೇ ವೇಳೆ ತನ್ನ ಮೇಲೆ ದಬ್ಬಾಳಿಕೆ ಆಗ್ತಿದೆ ಎಂದು ಸದನದಲ್ಲೇ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಶರ್ಟ್ ಬಿಚ್ಚಿ ಹೆಗಲ ಮೇಲೆ ಹಾಕಿಕೊಂಡು ಪ್ರತಿಭಟನೆ ಮಾಡಿದರು. ಗರಂ ಆದ ಸ್ಪೀಕರ್, ಸದನ ಅಂದ್ರೆ ಏನ್ ಅನ್ಕೊಂಡಿದ್ದೀರಿ? ಸದನ ಅಂದ್ರೆ ತಮಾಷೆ ಮಾಡ್ತೀರಾ? ಈ ಮೂಲಕ ಕ್ಷೇತ್ರದ ಜನತೆಗೆ ಅಗೌರವ ತಂದಿದ್ದೀರಿ. ಈ ರೀತಿ ಮಾಡಿದ್ರೆ ಕ್ರಮ ಕೈಗೊಳ್ತೀವಿ. ಸಭ್ಯತೆ ಮರೆತು ವರ್ತಿಸಿದ್ದೀರಿ ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿರಿ ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ…
ಹದಿನೈದು ನಿಮಿಷಗಳ ಕಾಲ ಸದನ ಮುಂದೂಡಿದ ಸ್ಪೀಕರ್, ಪೀಠದಿಂದ ಎದ್ದು ಹೋದರೂ ಪ್ರತಿಭಟನೆಯ ಸ್ಥಳದಿಂದ ಶಾಸಕ ಸಂಗಮೇಶ್ ತೆರಳಲಿಲ್ಲ. ಕಾಂಗ್ರೆಸ್ ಶಾಸಕರು ಕರೆದ್ರೂ ಸಂಗಮೇಶ್ ಪಟ್ಟು ಸಡಿಸಲಿಲ್ಲ. ಸ್ವತಃ ಸಿದ್ದರಾಮಯ್ಯ ಮನವೊಲಿಕೆ ಮಾಡಿದ್ರು ಜಗ್ಗಲಿಲ್ಲ. ನಂತರ ಡಿಕೆಶಿ ಅವರು ಶರ್ಟ್ ಹಾಕಿಸಿದರು.
ಶರ್ಟ್ ಬಿಚ್ಚಿ ಅಶಿಸ್ತು ತೋರಿದ ಸಂಗಮೇಶ್ ಅವರನ್ನ ಒಂದು ವಾರ ಸದನಕ್ಕೆ ಬಾರದಂತೆ ಅಮಾನತು ಮಾಡಿ ಸ್ಪೀಕರ್ ಕಾಗೇರಿ ಆದೇಶಿಸಿದರು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ನನ್ನ ಕ್ಷೇತ್ರದಲ್ಲಿ ಭಾರಿ ಕಿರುಕುಳ ಕೊಡ್ತಿದ್ದಾರೆ, ನನ್ನನ್ನು ನೀವೆ ರಕ್ಷಿಸಿ: ಶಾಸಕನ ಅಳಲು
ಇನ್ನೂ 19 ಜನರ ಸೆಕ್ಸ್ ಸಿಡಿ ಇದೆ, ಒಬ್ಬ ಮಾಜಿ ಸಿಎಂ ಅದಕ್ಕಾಗಿಯೇ ರೆಸಾರ್ಟ್ಗೆ ಹೋಗ್ತಾರೆ..!
ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ…
ಜೀವಂತ ಯುವಕನನ್ನೇ ಪೋಸ್ಟ್ ಮಾರ್ಟಂಗೆ ಕರೆದೊಯ್ದ ಆಸ್ಪತ್ರೆ ಸಿಬ್ಬಂದಿ! ಮುಂದೇನಾಯ್ತು?