More

    ಕಾಂಗ್ರೆಸ್​ನಲ್ಲಿ ದೊಡ್ಡ ಒಳಜಗಳವಿದೆ, ಡಿಕೆಶಿಯನ್ನು ಕಂಡರೆ ಸಿದ್ದರಾಮಯ್ಯ ಅವರಿಗೆ ಆಗಲ್ಲ: ಕೇಂದ್ರ ಸಚಿವ ಭಗವಂತ ಖೂಬಾ

    ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದು ಅವರ ಪಕ್ಷದವರೇ ಆದ ಸಲೀಂ ಹಾಗೂ ಉಗ್ರಪ್ಪ ಬಹಿರಂಗವಾಗಿ ಹೇಳಿಕೊಂಡಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ವ್ಯಾಪಕ ಟೀಕೆಗೂ ಗುರಿಯಾಗಿದೆ.

    ಈ ಸಂಬಂಧ ಇದೀಗ ಕೇಂದ್ರ ಸಚಿವ ಭಗವಂತ ಖೂಬಾ ಅವರು ಚಿತ್ರದುರ್ಗದಲ್ಲಿ ಮಾತನಾಡಿದ್ದಾರೆ. ಕಾಂಗ್ರೆಸ್​​ನ ಸಲೀಂ ಹಾಗೂ ಉಗ್ರಪ್ಪ ಅವರಿಗೆ ಈಗ ಜ್ಞಾನೋದಯ ಆಗಿದೆ. ಸತ್ಯಾಸತ್ಯತೆಯನ್ನು ತಡವಾಗಿಯಾದರೂ ಬಾಯಿಬಿಟ್ಟಿದ್ದಾರೆ. ಆದರೆ ಅವರು ಕಾಂಗ್ರೆಸ್​ ಭ್ರಷ್ಟಾಚಾರದ ಇಷ್ಟು ದಿನ ಮುಚ್ಚಿಟ್ಟಿದ್ದೇಕೆ ಎಂದು ಹೇಳಬೇಕು ಎಂಬುದಾಗಿ ಭಗವಂತ ಖೂಬಾ ಆಗ್ರಹಿಸಿದ್ದಾರೆ.

    ಇದನ್ನೂ ಓದಿ:ಆರ್​​ಎಸ್​ಎಸ್​ ಶಿಬಿರಕ್ಕೆ ಬರುವಂತೆ ಮಾಜಿ ಮುಖ್ಯಮಂತ್ರಿಗಳಿಬ್ಬರಿಗೆ ಆಹ್ವಾನ!; ಟೀಕಿಸೋ ಮೊದಲು ಶಿಬಿರಕ್ಕೆ ಬಂದು ವಿಷ್ಯ ತಿಳ್ಕೊಳಿ ಅಂತ ಪತ್ರ..

    ಈ ಸಂಬಂಧ ಮತ್ತಷ್ಟು ವಿಚಾರಗಳನ್ನು ಹಂಚಿಕೊಂಡಿರುವ ಅವರು, ಕಾಂಗ್ರೆಸ್​​ನಲ್ಲಿ ದೊಡ್ಡ ಪ್ರಮಾಣದಲ್ಲಿ ಒಳಜಗಳ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕಂಡರೆ ಸಿದ್ದರಾಮಯ್ಯ ಅವರಿಗೆ ಆಗುವುದಿಲ್ಲ ಎಂಬದನ್ನೂ ಹೇಳಿದ್ದಾರೆ.

    ಹನಿಟ್ರ್ಯಾಪ್​ ಗ್ಯಾಂಗ್ ಅರೆಸ್ಟ್​: ಮೈಮುಟ್ಟದೆ ಬಟ್ಟೆ ಬಿಚ್ಚಿಸುತ್ತಿದ್ದರು, ಫೀಮೇಲ್ ಹೆಸರಲ್ಲಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದರು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts