ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದು ಅವರ ಪಕ್ಷದವರೇ ಆದ ಸಲೀಂ ಹಾಗೂ ಉಗ್ರಪ್ಪ ಬಹಿರಂಗವಾಗಿ ಹೇಳಿಕೊಂಡಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ವ್ಯಾಪಕ ಟೀಕೆಗೂ ಗುರಿಯಾಗಿದೆ.
ಈ ಸಂಬಂಧ ಇದೀಗ ಕೇಂದ್ರ ಸಚಿವ ಭಗವಂತ ಖೂಬಾ ಅವರು ಚಿತ್ರದುರ್ಗದಲ್ಲಿ ಮಾತನಾಡಿದ್ದಾರೆ. ಕಾಂಗ್ರೆಸ್ನ ಸಲೀಂ ಹಾಗೂ ಉಗ್ರಪ್ಪ ಅವರಿಗೆ ಈಗ ಜ್ಞಾನೋದಯ ಆಗಿದೆ. ಸತ್ಯಾಸತ್ಯತೆಯನ್ನು ತಡವಾಗಿಯಾದರೂ ಬಾಯಿಬಿಟ್ಟಿದ್ದಾರೆ. ಆದರೆ ಅವರು ಕಾಂಗ್ರೆಸ್ ಭ್ರಷ್ಟಾಚಾರದ ಇಷ್ಟು ದಿನ ಮುಚ್ಚಿಟ್ಟಿದ್ದೇಕೆ ಎಂದು ಹೇಳಬೇಕು ಎಂಬುದಾಗಿ ಭಗವಂತ ಖೂಬಾ ಆಗ್ರಹಿಸಿದ್ದಾರೆ.
ಈ ಸಂಬಂಧ ಮತ್ತಷ್ಟು ವಿಚಾರಗಳನ್ನು ಹಂಚಿಕೊಂಡಿರುವ ಅವರು, ಕಾಂಗ್ರೆಸ್ನಲ್ಲಿ ದೊಡ್ಡ ಪ್ರಮಾಣದಲ್ಲಿ ಒಳಜಗಳ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕಂಡರೆ ಸಿದ್ದರಾಮಯ್ಯ ಅವರಿಗೆ ಆಗುವುದಿಲ್ಲ ಎಂಬದನ್ನೂ ಹೇಳಿದ್ದಾರೆ.
ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್: ಮೈಮುಟ್ಟದೆ ಬಟ್ಟೆ ಬಿಚ್ಚಿಸುತ್ತಿದ್ದರು, ಫೀಮೇಲ್ ಹೆಸರಲ್ಲಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದರು..