ಭಜನಾ ಸಂಸ್ಕೃತಿ ಅವಹೇಳನದಿಂದ ಸಭ್ಯತೆಗೆ ಧಕ್ಕೆ

Mbd_Bhajane

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಭಜನೆ ಅನಾದಿ ಕಾಲದಿಂದಲೂ ಬಂದಿರುವ ಸಂಸ್ಕೃತಿ, ದೇವರನ್ನು ಭಕ್ತಿಯಿಂದ ಒಲಿಸಿಕೊಳ್ಳಲು ವಾರ್ಗ. ಸ್ತುತಿ ಕೀರ್ತನೆಗೆ ಅವಹೇಳನಕಾರಿಯಾಗಿ ಪ್ರಚೋದನೆಕಾರಿ ಮಾತುಗಳನ್ನಾಡಿ ಸಭ್ಯತೆಗೆ ಭಂಗ ತರುವ ಕೆಲಸವನ್ನು ಕಿಡಿಗೇಡಿಗಳು ಮಾಡಿದ್ದಾರೆ. ಅವರಿಗೆ ಭಗವಂತ ಒಳ್ಳೆಯ ಬುದ್ಧಿಯನ್ನು ನೀಡಲಿ. ಮನಸ್ಸು ಪರಿವರ್ತನೆ ಆಗುವಂತೆ ಅವಕಾಶ ಕೊಡಲಿ ಎಂದು ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ಭಜನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಮತ್ತು ಭಜನೆ ವಿರುದ್ಧ ಮಾತನಾಡುವವರನ್ನು ಖಂಡಿಸಿ ಭಜನಾ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಹಾಗೂ ಜಿಲ್ಲೆಯ ವಿವಿಧ ಕುಣಿತ ಭಜನಾ ತಂಡಗಳಿಂದ ಮೂಡುಬಿದಿರೆಯಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಸಾವಿರ ಕಂಬದ ಬಸದಿಯಿಂದ ಸ್ವರಾಜ್ಯ ಮೈದಾನದವರೆಗೆ ಕುಣಿತ ಭಜನೆಯ ತಂಡಗಳು ದೇವರ ನಾಮಸ್ಮರಣೆಯನ್ನು ವಾಡುತ್ತಾ ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡುತ್ತಿರುವ ಅವಿವೇಕಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಭಗವಂತನಲ್ಲಿ ಪ್ರಾರ್ಥಿಸಿ ಮೆರವಣಿಗೆ ನಡೆಸಲಾಯಿತು.

ಹಿಂಜಾವೇ ಪ್ರಾಂತ ಕಾರ್ಯಕಾರಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಸೂಚಿ ಭಾಷಣ ಮಾಡಿದರು. ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಚಂದ್ರಶೇಖರ್, ತಾಲೂಕು ಅಧ್ಯಕ್ಷ ಲಕ್ಷ್ಮಣ್ ಸುವರ್ಣ, ವಿಶ್ವ ಹಿಂದು ಪರಿಷತ್ ಕಾರ್ಯಾಧ್ಯಕ್ಷ ಶಾಮ್ ಹೆಗ್ಡೆ, ಸಾವಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಕಾರ್ಕಳ, ಹಿಂದು ಸಂಟನೆ ಪ್ರಮುಖರಾದ ಪ್ರಶಾಂತ್ ಕೆಂಪುಗುಡ್ಡೆ, ರಂಜಿತ್ ಪೂಜಾರಿ ತೋಡಾರು, ಅಶೋಕ್ ಶೆಟ್ಟಿ ಬೇಲೊಟ್ಟು, ಮಂಜುನಾಥ್ ಬೆಳುವಾಯಿ, ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾವಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ದರೆಗುಡ್ಡೆ, ಗಣೇಶ್ ಬಿ.ಅಳಿಯೂರು, ವಿಹಿಂಪ ಬಜರಂಗದಳದ ಸುಚೇತನ್ ಜೈನ್ ಮತ್ತಿತರರಿದ್ದರು.

ಆಳ್ವಾಸ್‌ಗೆ 18ನೇ ಬಾರಿ ಸಮಗ್ರ ಪ್ರಶಸ್ತಿ

ಕಲೋತ್ಸವದಲ್ಲಿ ದಾಂಧಲೆ, ಆರೋಪಿ ಬಂಧನ

 

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…