ಬಸವೇಶ್ವರ ಸ್ವಾಮಿ ಜೋಡಿ ರಥೋತ್ಸವ

blank

ಹೊನ್ನಾಳಿ: ತಾಲೂಕಿನ ಅರಬಗಟ್ಟೆ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿಯ ಜೋಡಿ ರಥೋತ್ಸವ ಶನಿವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

blank

ಬೆಳಗ್ಗೆ ಶ್ರೀ ಜೋಡಿ ಬಸವಣ್ಣನಿಗೆ ವಿಶೇಷ ಪೂಜಾ ಕೈಂಕರ್ಯ ನಡೆಸಿದ ನಂತರ ಜೋಡಿ ಬಸವೇಶ್ವರ ದೇವರು, ಬೀರಲಿಂಗೇಶ್ವರ ದೇವರು, ಆಂಜನೇಯ ಸ್ವಾಮಿ, ಮಾದನಬಾವಿ ಗ್ರಾಮದ ಬೀರಲಿಂಗೇಶ್ವರ ಹಾಗೂ ರಂಗಪ್ಪ ದೇವರ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮೂಲಕ ಕರೆತಂದು ಜೋಡಿ ರಥಗಳಿಗೆ ಪೂಜೆ ಸಲ್ಲಿಸಲಾಯಿತು.

ನಂತರ ಗ್ರಾಮದ ಬೂದಿಗೌಡ್ರು ಮತ್ತು ಪಲ್ದಾರ್ ಗೌಡರ ಮನೆಯಿಂದ ಬಲಿ ಅನ್ನದ ಎಡೆಯನ್ನು ತಂದು ರಥಕ್ಕೆ ನೈವೇದ್ಯ ಮಾಡಲಾಯಿತು.

ಒಂದು ರಥದಲ್ಲಿ ಬಸವೇಶ್ವರ ಮೂರ್ತಿ ಹಾಗೂ ಇನ್ನೊಂದು ರಥದಲ್ಲಿ ಶ್ರೀ ಆಂಜನೇಯ ಸ್ವಾಮಿ ಮೂರ್ತಿ ಕುಳ್ಳಿರಿಸಿ ಮಂತ್ರಘೋಷದೊಂದಿಗೆ ಭಕ್ತರು ತೇರು ಎಳೆದರು. ಮಂಡಕ್ಕಿ, ಮೆಣಸಿನ ಕಾಳು ಜತೆಗೆ ಬಾಳೆಹಣ್ಣು, ತೆಂಗಿನ ಕಾಯಿ ಸಮರ್ಪಿಸಿದರು.

ಗ್ರಾಮದ ಎಲ್ಲ ದೇವಸ್ಥಾನಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ರಾಜಬೀದಿಗಳಲ್ಲಿ ಮಂಗಳವಾದ್ಯದೊಂದಿಗೆ ದೇವರ ಉತ್ಸವ ಮೂರ್ತಿಗಳ ಮೆರವಣಿಗೆ ಮಾಡಲಾಯಿತು.

ಗುರುವಾರ ಕಂಕಣ ಧಾರಣೆ, ಶುಕ್ರವಾರ ರಾತ್ರಿ ಆನೆ ಉತ್ಸವ, ಶನಿವಾರ ರಾತ್ರಿ ಹೂವಿನ ತೇರಿಗೆ ಕಳಸಾರೋಹಣ, ಶ್ರೀ ಬಸವೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮಾಡಲಾಗಿತ್ತು.

Share This Article

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…

ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit

Vomit : ಕೆಲವರಿಗೆ ಬಸ್​ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…