ಕೋಲ್ಕತ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೆಲವು ನಿಯಮಗಳು ಕಾರ್ಮಿಕ ವಿರೋಧಿಯಾಗಿದೆ ಎಂದು ಆರೋಪಿಸಿ ದೇಶದ ವಿವಿಧ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೀಗಿದ್ದರೂ ಮುಂಜಾಗ್ರತ ಕ್ರಮವಾಗಿ ದೇಶದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ದೇಶದ ಹಲೆವೆಡೆ ವಿವಿಧ ಸಂಘಟನೆಗಳು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸುತ್ತಿದ್ದು, ಇದರ ನಡುವೆ ಪಶ್ಚಿಮ ಬಂಗಾಳದಲ್ಲಿ ಕಂಡುಬಂದ ದೃಶ್ಯವೊಂದು ನೆಟ್ಟಿಗರ ಗಮನ ಸೆಳೆದಿದೆ.
ಉತ್ತರ ಬಂಗಾಳದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ಮುನ್ನೆಚ್ಚರಿಕಾ ಕ್ರಮವಾಗಿ ಹೆಲ್ಮೆಟ್ ಧರಿಸಿ ಬಸ್ ಚಾಲನೆ ಮಾಡಿದ್ದು, ಗಮನ ಸೆಳೆದಿದೆ. ಪ್ರತಿಭಟನೆ ಉಗ್ರ ರೂಪಕ್ಕೆ ತಿರುಗಬಹುದು ಎಂಬ ಎಚ್ಚರಿಕೆಯಿಂದ ಆತ್ಮರಕ್ಷಣೆಗಾಗಿ ಹೆಲ್ಮೆಟ್ ಧರಿಸಿ ಬಂದಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚಾಲಕನೇನೂ ಹೆಲ್ಮೆಟ್ ಧರಿಸಿದ್ದಾರೆ. ಪ್ರಯಾಣಿಕರ ಕತೆಯೇನು ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ. ಹಾಗೇಯೇ ಚಾಲಕನ ಬುದ್ಧಿವಂತಿಕೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)
Prevention is Better than Cure. https://t.co/M0BBDnMHCs
— Pankaj Thapliyal (@PankajT04765688) January 8, 2020