ಕಡೂರು: ಪಟ್ಟಣದ ಶ್ರೀ ರಾಯದುರ್ಗದ ರೇಣುಕಾಂಬ ದೇವಸ್ಥಾನದಲ್ಲಿ ಭಾರತ ಹುಣ್ಣಿಮೆಯ 20ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಎರಡು ದಿನ ನಡೆಯುವ ಧಾರ್ಮಿಕ ಪೂಜಾ ಮಹೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಬೆಳಗ್ಗೆ ಪಟ್ಟಣದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಶ್ರೀರೇಣುಕಾಂಬ ದೇವಿ ಉತ್ಸವ ಮೂರ್ತಿಯೊಂದಿಗೆ ಹೊಳೆ ಪೂಜೆ ನಡೆಸಲಾಯಿತು. ನಂತರ ದೇವಿ ಉತ್ಸವ ಮೂರ್ತಿ ಪಲ್ಲಕ್ಕಿಯನ್ನು ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಬುಧವಾರ ಭಾರತ್ ಹುಣ್ಣಿಮೆಯ ಅಂಗವಾಗಿ ಬೆಳಗ್ಗೆ ಅಮ್ಮನವರ ದೇವಾಲಯದಲ್ಲಿ ದೇವತಾ ಪ್ರಾರ್ಥನೆ, ವಿವಿಧ ಅಲಂಕಾರದೊಂದಿಗೆ ಸಂಕಲ್ಪ ಸೇವೆಗಳು, ಅಭಿಷೇಕ ಪೂಜಾ ಕೈಂಕರ್ಯಗಳು ನಡೆಯಲಿವೆ. ನಲ್ಲೂರಿ ಸುರೇಶ್, ಕೆ.ಜಿ.ರವಿ, ಕೆ.ಜಿ.ಲೋಕೇಶ್ವರ್, ಗೋಪಿ, ರಮೇಶ್, ಸತೀಶ್, ಕೆ.ಎಂ.ಶ್ರೀನಿವಾಸ್, ದುಶ್ಯಂತ ಕುಮಾರ್, ಕೆ.ಎಂ.ಸತೀಶ್ಕುಮಾರ್, ಜಯಣ್ಣ, ಬಾಬು, ಪೇಟೆ ಕುಮಾರ್, ಕೃಷ್ಣಮೂರ್ತಿ, ಪಂಗ್ಲಿ ಮಂಜುನಾಥ್, ಲೋಹಿತ್, ಮಧುಕರ ಮೋಹನ್ ಹಾಗೂ ನೂರಾರು ಮಹಿಳೆಯರು ಭಾಗವಹಿಸಿದ್ದರು.
ಭಾರತ ಹುಣ್ಣಿಮೆಯ ವಾರ್ಷಿಕೋತ್ಸವಕ್ಕೆ ಚಾಲನೆ

Summer Tips: ಬೇಸಿಗೆಯಲ್ಲಿ ಕೆಟ್ಟ ಬೆವರು ವಾಸನೆಯಿಂದ ತೊಂದರೆ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ
Summer Tips: ಬೇಸಿಗೆಯಲ್ಲಿ ಬೆವರು ವಾಸನೆಯನ್ನು ತಪ್ಪಿಸಲು, ನೀವು ಪ್ರತಿದಿನ ಸ್ನಾನ ಮಾಡುವುದು ಮತ್ತು ನಿಯಮಿತವಾಗಿ…
ಈ ಬೇಸಿಗೆಯಲ್ಲಿ ಯಾವ ರೀತಿಯ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು ಗೊತ್ತಾ? Summer Clothes
Summer Clothes: ಬೇಸಿಗೆಯಲ್ಲಿ ಸುಡುವ ಬಿಸಿಲು ಮತ್ತು ಬೆವರಿನಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಆಹಾರ ಕ್ರಮವನ್ನು ಬದಲಿಸಿಕೊಳ್ಳುತ್ತೇವೆ.…
ಹೆಚ್ಚಾದರೆ ದೇಹದ ಬೊಜ್ಜು ಭವಿಷ್ಯವಾದೀತು ನಜ್ಜುಗುಜ್ಜು
‘ಏನಾದ್ರೂ ಮಾಡಿ ಹೇಗಾದ್ರೂ ಮಾಡಿ ಸಾರ್, ಈ ಹೊಟ್ಟೆ ಕರಗಿ ಮೊದಲಿನಂತಾದರೆ ಸಾಕು. ನನಗಿನ್ನೂ ಮದುವೆಯಾಗಿಲ್ಲ.…