More

    ಪಿವಿ ನರಸಿಂಹರಾವ್​ಗೆ ಭಾರತ ರತ್ನ; ಕಾಂಗ್ರೆಸ್​, ಗಾಂಧಿ ಪರಿವಾರದ ವಿರುದ್ಧ ಹರಿಹಾಯ್ದ ರಾವ್​ ಮೊಮ್ಮಗ

    ನವದೆಹಲಿ: ಮಾಜಿ ಪ್ರಧಾನಿ ದಿ. ಪಿವಿ ನರಸಿಂಹ ರಾವ್​ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿರುವುದನ್ನು ಸ್ವಾಗತಿಸಿರುವ ಅವರ ಮೊಮ್ಮಗ ಎನ್​.ವಿ. ಸುಭಾಷ್​​ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇದೊಂದು ಭಾವನಾತ್ಮಕ ಕ್ಷಣವಾಗಿದ್ದು, ಕೇಂದ್ರ ಸರ್ಕಾರ ನಮ್ಮ ತಾತನವರಿಗೆ ಭಾರತ ರತ್ನ ನೀಡಿ ಗೌರವಿಸಿದೆ. ಆದರೆ, ಕಾಂಗ್ರೆಸ್​ನವರ ರೀತಿ ತಮ್ಮ ವೈಫಲ್ಯಗಳಿಗೆ ಬಲಿಪಶುವನ್ನಾಗಿಸಲಿಲ್ಲ ಎಂದು ಕಿಡಿಕಾರಿದ್ದಾರೆ.

    ಇದನ್ನೂ ಓದಿ: ಮುನಿಸು ಮರೆತು ಒಂದಾದ್ರ ವಿಜಯೇಂದ್ರ-ಯತ್ನಾಳ್; ದೆಹಲಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡ ರೆಬೆಲ್​ ನಾಯಕರು

    ಕಾಂಗ್ರೆಸ್‌ ತಮ್ಮ ಪಕ್ಷದ ವೈಫಲ್ಯಗಳಿಗೆ ರಾವ್ ಅವರನ್ನು ಬಲಿಪಶುವನ್ನಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನಮ್ಮ ತಾತನವರು ಕಾಂಗ್ರೆಸ್​ ಪಕ್ಷದಲ್ಲಿ ಇದ್ದರೂ ಸಹ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅವರಿಗೆ ಭಾರತ ರತ್ನ ನೀಡುವ ಮೂಲಕ ಗೌರವಿಸಿದೆ. ಈ ವಿಚಾರದಲ್ಲಿ ನಾನು ಯುಪಿಎ ಹಾಗೂ ಗಾಂಧಿ ಕುಟುಂಬವನ್ನು ಸಂಪೂರ್ಣವಾಗಿ ದೂಷಿಸುತ್ತೇನೆ.

    ನರೇಂದ್ರ ಮೋದಿಯವರು ರಾಷ್ಟ್ರೀಯ ನಾಯಕರಾಗಿ ಮತ್ತು ಇಡೀ ಪ್ರಪಂಚದ ನಾಯಕರಾಗಿ, ಇತರ ನಾಯಕರನ್ನು ನಿರಂತರವಾಗಿ ಗುರುತಿಸುತ್ತಿರುವ ಈ ನಿರ್ಣಾಯಕ ಘಟ್ಟದಲ್ಲಿ ಇದು ಹೆಮ್ಮೆ, ಇದು ನಮಗೆ ಗೌರವ ಎಂದು ನಾನು ಭಾವಿಸುತ್ತೇನೆ. ಈ ಸಮಯದಲ್ಲಿ ಭಾವುಕನಾಗಿದ್ದೇನೆ. ಏಕೆಂದರೆ ಭಾರತ ರತ್ನ ಪ್ರಶಸ್ತಿ ವಿಳಂಬವಾಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts