ಮುದರಂಗಡಿಗೆ 4.65 ಕೋಟಿ ರೂ.ಮೀಸಲು

blank

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಮುದರಂಗಡಿ ಗ್ರಾಪಂ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 4.65 ಕೋಟಿ ರೂ. ಅನುದಾನವನ್ನು ಅದಾನಿ ಸಿಎಸ್‌ಆರ್‌ನಲ್ಲಿ ಮೀಸಲಿಟ್ಟಿದ್ದು, ಹಂತ ಹಂತವಾಗಿ ಗ್ರಾಪಂ ನೀಡುವ ಕ್ರಿಯಾಯೋಜನೆಯಂತೆ ಯೋಜನೆ ಅನುಷ್ಠಾನಕ್ಕೆ ತರುತ್ತಿದೆ ಎಂದು ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಹೇಳಿದರು.

ಮುದರಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅದಾನಿ ಫೌಂಡೇಷನ್ ವತಿಯಿಂದ 17 ಲಕ್ಷ ರೂ. ಮೊತ್ತದ ಮೂಲಸೌಕರ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯ ಸಾಂತೂರು ಗ್ರಾಮದ ಕಾಂಜರಕಟ್ಟೆ- ಆಲ್ ಬ್ರಹ್ಮಸ್ಥಾನ ಸಂಪರ್ಕ ರಸ್ತೆಯ ಕಾಂಕ್ರೀಟೀಕರಣ ಹಾಗೂ ಪಿಲಾರ್ ಗ್ರಾಮದ ಕಂಕಣಗುತ್ತು ಕೋಡ್ದಬ್ಬು ದೈವಸ್ಥಾನದ ಪ್ರಾಂಗಣಕ್ಕೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದರು.

ಗ್ರಾಪಂ ಅಧ್ಯಕ್ಷೆ ನಮಿತಾ, ಸದಸ್ಯರಾದ ಡೇವಿಡ್ ಡಿಸೋಜ, ರವೀಂದ್ರ ಪ್ರಭು, ಕೋಡ್ದಬ್ಬು ದೈವಸ್ಥಾನ ಸಮಿತಿ ಅಧ್ಯಕ್ಷ ರವೀಶ್ ಶೆಟ್ಟಿ, ಸದಸ್ಯರಾದ ಮೋಹನ್ ಶೆಟ್ಟಿ, ರಮೇಶ್ ಶೆಟ್ಟಿ, ಸರ್ವೋತ್ತಮ ಶೆಟ್ಟಿ, ರಾಮ ಪೂಜಾರಿ, ಪ್ರಕಾಶ ಶೆಟ್ಟಿ, ಹರೀಶ್ ಶೆಟ್ಟಿ, ಅರ್ಚಕ ರಮೇಶ ಮುಖಾರಿ, ಅದಾನಿ ಪವರ್ ಲಿಮಿಟೆಡ್ ಸಂಸ್ಥೆ ಎಜಿಎಂ ರವಿ ಆರ್.ಜೇರೆ, ಅದಾನಿ ಫೌಂಡೇಷನ್‌ನ ಅನುದೀಪ್ ಉಪಸ್ಥಿತರಿದ್ದರು.

ಈಗಾಗಲೇ ಅದಾನಿ ಸಂಸ್ಥೆಯು 4 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಮುದರಂಗಡಿ ಪಂಚಾಯಿತಿ ನೀಡಿರುವ ಕ್ರಿಯಾಯೋಜನೆಯಂತೆ ಕಾರ್ಯರೂಪಕ್ಕೆ ತಂದಿದೆ. 9 ವರ್ಷದಲ್ಲಿ, ಉಡುಪಿ ಉಷ್ಣ ವಿದ್ಯುತ್ ಸ್ಥಾವರ ಅದಾನಿ ತೆಕ್ಕೆಗೆ ಬಂದ ಮೇಲೆ ಸರಾಸರಿ ಪ್ರತಿ ವಾರ್ಷಿಕ ಸಾಲಿನಲ್ಲಿ 4 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಸ್ಥಾವರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾಮಾಜಿಕ ಅಭಿವೃದ್ಧಿ ಕೆಲಸಗಳಿಗೆ ವ್ಯಯಿಸಿದೆ.
-ಕಿಶೋರ್ ಆಳ್ವ, ಕಾರ್ಯನಿರ್ವಾಹಕ ನಿರ್ದೇಶಕ, ಅದಾನಿ ಸಮೂಹ ಸಂಸ್ಥೆ

ಗುಣಮಟ್ಟದ ಶಿಕ್ಷಣದಿಂದ ಸರ್ಕಾರಿ ಶಾಲೆ ಅಭಿವೃದ್ಧಿ

ಶಿಲ್ಪಕಲೆಗೆ ಜೀವನವನ್ನೇ ಮುಡಿಪಾಗಿಟ್ಟ ಧೀಮಂತ ಜಕಣಾಚಾರಿ

 

Share This Article

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…

ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ! ಇಲ್ಲಿದೆ ನೋಡಿ ಅಚ್ಚರಿ ವರದಿ | Liver Health

Liver Health: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು…