ಸ್ಮಶಾನದ ಒಳಾಂಗಣ ಅಭಿವೃದ್ಧಿಗೆ ಭೂಮಿಪೂಜೆ

blank

ಹುಣಸೂರು: ಅಮೃತ್ ನಗರೋತ್ಥಾನ ಯೋಜನೆಯ ನಾಲ್ಕನೇ ಹಂತ(ಪ್ಯಾಕೇಜ್-3)ದಡಿ ಅನುಮೋದನೆಗೊಂಡಿರುವ ನಗರದ ಸರಸ್ವತಿಪುರಂ ಬಡಾವಣೆಯ ಪರಿಶಿಷ್ಟ ಜಾತಿಯ ಜನಾಂಗದ ಸ್ಮಶಾನದ ಒಳಾಂಗಣ ಅಭಿವೃದ್ಧಿಗಾಗಿ 15.81 ಲಕ್ಷ ರೂ.ವೆಚ್ಚದ ಕಾಮಗಾರಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಭೂಮಿಪೂಜೆ ನೆರವೇರಿಸಿದರು.

ಶನಿವಾರ ಸ್ಮಶಾನದ ಆವರಣದಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದ ಸರಸ್ವರಿಪುರಂ ನಾಗರಿಕರ ಬಹುವರ್ಷಗಳ ಬೇಡಿಕೆಯನ್ನು ಇದೀಗ ಈಡೇರಿಸಲಾಗುತ್ತಿದೆ. ಬಡಾವಣೆಯಿಂದ ಸಾಕಷ್ಟು ದೂರದಲ್ಲಿ ಸ್ಮಶಾನವಿದ್ದು, ರಸ್ತೆ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಕಾಡುತ್ತಿತ್ತು. ಇದೀಗ ಅಮೃತ್ ನಗರೋತ್ಥಾನ ಯೋಜನೆಯಡಿ ಅಭಿವೃದ್ಧಿಗೆ ಅವಕಾಶ ದೊರೆತಿದೆ. ರಾಜ್ಯ ಸರ್ಕಾರದಿಂದ ಯಾವುದೇ ಯೋಜನೆಗಳಿಗೆ ಅನುದಾನದ ಲಭ್ಯತೆ ದೊರಕದಿರುವ ಕಾರಣ ಅಭಿವೃದ್ಧಿ ಯೋಜನೆಗಳು ನನೆಗುದಿಗೆ ಬೀಳುತ್ತಿವೆ. ಈ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಬೇಕಿದೆ. ಸರಸ್ವತಿಪುರಂ ಬಡಾವಣೆಯ ನಿವಾಸಿಗಳಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣದ ಅವಶ್ಯಕತೆಯಿದ್ದು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದೆಂದರು.

ನಗರಸಭಾಧ್ಯಕ್ಷ ಎಸ್.ಶರವಣ, ಸದಸ್ಯ ಸತೀಶ್‌ಕುಮಾರ್, ಗಣೇಶ್ ಕುಮಾರಸ್ವಾಮಿ, ಮುಖಂಡರಾದ ಹರವೆ ಶ್ರೀಧರ್, ನಾಗರಾಜು, ನಗರಸಭೆ ಪೌರಾಯುಕ್ತೆ ಕೆ.ಮಾನಸಾ, ಎಇಇ ಶರ್ಮಿಳಾ, ಎಇ ಸಮಂತ್ ಮತ್ತು ಬಡಾವಣೆ ನಿವಾಸಿಗಳು ಹಾಜರಿದ್ದರು.

 

 

 

 

 

 

Share This Article

ವೈರಲ್ ಆಗುತ್ತಿರುವ ಬೀಟ್‌ರೂಟ್ ಗಂಜಿ, ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ: ನೀವು ಒಮ್ಮೆ ಟ್ರೈ ಮಾಡಿ | Beetroot Porridge

Beetroot Porridge: ಬೀಟ್‌ರೂಟ್‌ ಗಂಜಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಸಖತ್​​ ವೈರಲ್​ ಆಗುತ್ತಿದೆ. ಈ ಬೀಟ್‌ರೂಟ್…

ನೀವು ಗ್ಯಾಸ್ಟ್ರಿಕ್, ಅಸಿಡಿಟಿ, ಅಜೀರ್ಣ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು…Acidity

Acidity: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಬಳಲುತ್ತಿರುವ ಸಮಸ್ಯೆಗಳಲ್ಲಿ ಗ್ಯಾಸ್ಟ್ರಿಕ್, ಅಸಿಡಿಟಿ, ಅಜೀರ್ಣ. ಇದಕ್ಕಾಗಿ ಹಲವು…

ಸ್ನಾನ ಮಾಡುವಾಗ ಮೂತ್ರ ವಿಸರ್ಜಿಸುವುದು ಅಪಾಯಕಾರಿಯೇ? ಇಲ್ಲಿದೆ ಉಪಯುಕ್ತ ಮಾಹಿತಿ… Urinating

Urinating : ನಮ್ಮ ದೇಹದಿಂದ ತ್ಯಾಜ್ಯವನ್ನು ಹೊರಹಾಕುವಲ್ಲಿ ಮೂತ್ರವು ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ, ನಮ್ಮ…