ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರತೀಯ ಭೋವಿ ಸಮಾಜದವರಿಗೆ ಸಮುದಾಯ ಭವನ, ಶಾಲೆ ನಿರ್ವಣಕ್ಕೆ ಜಾಗ ಮಂಜೂರು ಮಾಡುವಂತೆ ಒತ್ತಾಯಿಸಿ ಶಾಸಕ ಸಿ.ಟಿ ರವಿ ಅವರಿಗೆ ಸಮಾಜದ ಜಿಲ್ಲಾಧ್ಯಕ್ಷ ಬಿ.ಟಿ.ಚಂದ್ರಶೇಖರ್ ಸೋಮವಾರ ಮನವಿ ಸಲ್ಲಿಸಿದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 2 ಲಕ್ಷಕ್ಕೂ ಅಧಿಕ ಮಂದಿ ಭೋವಿ ಸಮಾಜದವರು ವಾಸವಾಗಿದ್ದಾರೆ. ಸಮುದಾಯದ ಅಭಿವೃದ್ಧಿಗಾಗಿ ಯಾವುದೇ ಮಠ, ಮಂದಿರಗಳು, ಸಮುದಾಯ ಭವನಗಳು ಇಲ್ಲ. ಜತೆಗೆ ಜಿಲ್ಲೆಯಲ್ಲಿ ಸಮುದಾಯ ಏಳಿಗೆಗಾಗಿ ಕೇಂದ್ರ ಭವನ ನಿರ್ವಿುಸಲು ಸರ್ಕಾರದಿಂದ ಭೂಮಿ ಮಂಜೂರು ಮಾಡಿಲ್ಲ. ಸಮಾಜದ ಅಭಿವೃದ್ಧಿಗಾಗಿ ಪ್ರತಿ ತಾಲೂಕಿನಲ್ಲೂ ತಲಾ 2 ಎಕರೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿದರು.
ಸಮಾಜದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲೆ ಹಾಗೂ ಹಾಸ್ಟೆಲ್ ನಿರ್ವಣಕ್ಕೆ 10 ಎಕರೆ ಭೂಮಿ ಮಂಜೂರು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಭಾರತೀಯ ಭೋವಿ ಜನಾಂಗ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ ಇತರರಿದ್ದರು.