More

    ತಡೆಗೋಡೆ ನಿರ್ಮಾಣಕ್ಕೆ ಭೂಮಿಪೂಜೆ

    ಸುಂಟಿಕೊಪ್ಪ: ಮಾದಾಪುರ ಗ್ರಾಮ ಪಂಚಾಯಿತಿಯ ಕುಂಬೂರು ಹಾಗೂ ಮಾದಾಪುರ ರಾಜ್ಯ ಹೆದ್ದಾರಿ ಬಳಿ 50 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಡಾ.ಮಂತರ್‌ಗೌಡ ಭೂಮಿಪೂಜೆ ನೆರವೇರಿಸಿದರು.

    ಗುಣಮಟ್ಟದ ಕಾಮಗಾರಿ ನಿರ್ವಹಿಸಬೇಕು. ಕಳಪೆ ಮಾಡಿ ಕೈತೊಳೆದುಕೊಂಡರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಗುತ್ತಿಗೆದಾರರಿಗೆ ಎಚ್ಚರಿಸಿದರು. ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನು ನೇಮಕ ಮಾಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಶಾಸಕರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಮಂತರ್‌ಗೌಡ, ಸ್ಥಳದಲ್ಲೇ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಕರೆ ಮಾಡಿ, ವೈದ್ಯರ ನೇಮಕಕ್ಕೆ ಕ್ರಮ ವಹಿಸಬೇಕೆಂದು ಸೂಚಿಸಿದರು.

    ಮಾದಾಪುರ ಗ್ರಾಪಂ ಅಧ್ಯಕ್ಷ ಮನುಬಿದ್ದಪ್ಪ, ಉಪಾಧ್ಯಕ್ಷ ಸುರೇಶಬಾವೆ, ಸದಸ್ಯರಾದ ಕೆ.ಎ.ಲತೀಫ್, ಪಿ.ಡಿ.ಅಂತೋಣಿ ತಂಗಚ್ಚ, ಸೋಮಣ್ಣ, ಕೆ.ಶೀಲಾ, ಮಾನಸ, ನಿರೂಪ, ಜ್ಯೋತಿ, ಪಿಡಿಒ ಸುರೇಶ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಜಿ.ಸತೀಶ, ಮಾದಾಪುರ ಹೋಬಳಿ ಅಧ್ಯಕ್ಷ ದಾದು ಬೋಪಯ್ಯ, ಕುಂಬೂರು ಗ್ರಾಮದ ಅಧ್ಯಕ್ಷ ಸುಂದರ, ಮಾದಾಪುರ ಕಾಂಗ್ರೆಸ್ ಮುಖಂಡ ಮೇದೂರ ಹರೀಶ, ಮಾಜಿ ಮಂಡಲ ಪ್ರಧಾನ ಎ.ಬಿ.ಉಮ್ಮರ್, ಮಜೀದ್, ಮಾಜಿ ಉಪಾಧ್ಯಕ್ಷ ಅಣ್ಣಾ, ಇಬ್ರಾಹಿಂ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts